ಬಾಲಕರನ್ನು ಥಳಿಸುತ್ತಿರುವ ದೃಶ್ಯ 
ರಾಜ್ಯ

ಹೊಸಕೋಟೆಯಲ್ಲೊಂದು ಅಮಾನವೀಯ ಘಟನೆ: ಕದ್ದರೆಂದು ಬಾಲಕರನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಏಳು...

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಏಳು ಜನರ ತಂಡವೊಂದು ಮೂವರು ಅಪ್ರಾಪ್ತ ಬಾಲಕರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
ಕಳೆದ ಜೂನ್‌ 30 ರಂದು ಈ ಘಟನೆ ನಡೆದಿದ್ದು, ವ್ಯಾಪಾರಿ ಮುಸ್ತಾಕ್‌ ಎನ್ನುವವರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಇದೇ ಆರೋಪದಲ್ಲಿ ಮುಸ್ತಾಕ್‌ ಅವರ ಪುತ್ರ ನೂರುದ್ದೀನ್‌ ತನ್ನ 6 ಮಂದಿ ಸ್ನೇಹಿತರೊಂದಿಗೆ ಬಾಲಕರನ್ನು ಶಾಲೆಯಿಂದ ಬಯಲಿಗೆ ಎಳೆದೊಯ್ದು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಾಲಕರು ಬಿದ್ದು ಗೊಗೆರೆದರೂ ಬಿಡದ ಹಲ್ಲೆ ಕೋರರು ಬಾಲಕರ ಕೈಕಾಲುಗಳನ್ನು ತಿರುಚಿ, ಅವರ ಮೈಮೇಲೆ ನಿಂತು ರಕ್ಕಸರಂತೆ ವರ್ತಿಸಿದ್ದಾರೆ. ಈ ಎಲ್ಲಾ ಅಟ್ಟಹಾಸವನ್ನು ವಿಡಿಯೋ ಚಿತ್ರಿಕರಣ ಮಾಡಿಕೊಂಡು ಇತರರಿಗೆ ತೋರಿಸಿ ತಮ್ಮ ಏರಿಯಾದಲ್ಲಿ ಹವಾ ಹೇಗಿದೆ ಎನ್ನುವದನ್ನು ತೋರಿಸಲು ಮುಂದಾಗಿದ್ದಾರೆ. 
ಹಲ್ಲೆಯ ಬಳಿಕ ತೀವ್ರ ಅಸ್ವಸ್ಥಗೊಂಡ ಬಾಲಕರು ಮನೆಗೆ ಬಂದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಬೇಜವಾಬ್ದಾರಿತನ ಪ್ರದರ್ಶಿಸಿ ಪ್ರಕರಣ ದಾಖಲಿಸಿಲು ಹಿಂಜರಿದಿದ್ದಾರೆ.
ಇದೀಗ ಘಟನೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಹೊಸಕೋಟೆ ಪೊಲೀಸರು ಪ್ರರಕಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT