ಬಾಲಕರನ್ನು ಥಳಿಸುತ್ತಿರುವ ದೃಶ್ಯ 
ರಾಜ್ಯ

ಹೊಸಕೋಟೆಯಲ್ಲೊಂದು ಅಮಾನವೀಯ ಘಟನೆ: ಕದ್ದರೆಂದು ಬಾಲಕರನ್ನು ವಿವಸ್ತ್ರಗೊಳಿಸಿ ಮಾರಣಾಂತಿಕ ಹಲ್ಲೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಏಳು...

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆಯಲ್ಲಿ ಅಂಗಡಿಯೊಂದರಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಏಳು ಜನರ ತಂಡವೊಂದು ಮೂವರು ಅಪ್ರಾಪ್ತ ಬಾಲಕರನ್ನು ವಿವಸ್ತ್ರಗೊಳಿಸಿ ಅಮಾನವೀಯವಾಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 
ಕಳೆದ ಜೂನ್‌ 30 ರಂದು ಈ ಘಟನೆ ನಡೆದಿದ್ದು, ವ್ಯಾಪಾರಿ ಮುಸ್ತಾಕ್‌ ಎನ್ನುವವರ ಅಂಗಡಿಯಲ್ಲಿ ಕಳ್ಳತನ ನಡೆದಿದ್ದು, ಇದೇ ಆರೋಪದಲ್ಲಿ ಮುಸ್ತಾಕ್‌ ಅವರ ಪುತ್ರ ನೂರುದ್ದೀನ್‌ ತನ್ನ 6 ಮಂದಿ ಸ್ನೇಹಿತರೊಂದಿಗೆ ಬಾಲಕರನ್ನು ಶಾಲೆಯಿಂದ ಬಯಲಿಗೆ ಎಳೆದೊಯ್ದು ವಿವಸ್ತ್ರಗೊಳಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.
ಬಾಲಕರು ಬಿದ್ದು ಗೊಗೆರೆದರೂ ಬಿಡದ ಹಲ್ಲೆ ಕೋರರು ಬಾಲಕರ ಕೈಕಾಲುಗಳನ್ನು ತಿರುಚಿ, ಅವರ ಮೈಮೇಲೆ ನಿಂತು ರಕ್ಕಸರಂತೆ ವರ್ತಿಸಿದ್ದಾರೆ. ಈ ಎಲ್ಲಾ ಅಟ್ಟಹಾಸವನ್ನು ವಿಡಿಯೋ ಚಿತ್ರಿಕರಣ ಮಾಡಿಕೊಂಡು ಇತರರಿಗೆ ತೋರಿಸಿ ತಮ್ಮ ಏರಿಯಾದಲ್ಲಿ ಹವಾ ಹೇಗಿದೆ ಎನ್ನುವದನ್ನು ತೋರಿಸಲು ಮುಂದಾಗಿದ್ದಾರೆ. 
ಹಲ್ಲೆಯ ಬಳಿಕ ತೀವ್ರ ಅಸ್ವಸ್ಥಗೊಂಡ ಬಾಲಕರು ಮನೆಗೆ ಬಂದಾಗ ಆತಂಕಗೊಂಡ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆದರೆ ಪೊಲೀಸರು ಬೇಜವಾಬ್ದಾರಿತನ ಪ್ರದರ್ಶಿಸಿ ಪ್ರಕರಣ ದಾಖಲಿಸಿಲು ಹಿಂಜರಿದಿದ್ದಾರೆ.
ಇದೀಗ ಘಟನೆ ಮಾಧ್ಯಮಗಳಲ್ಲಿ ದೊಡ್ಡ ಸುದ್ದಿಯಾಗುತ್ತಿದ್ದಂತೆ ಹೊಸಕೋಟೆ ಪೊಲೀಸರು ಪ್ರರಕಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026, qualifier 1: ಟಾಸ್ ಗೆದ್ದ GT ಬೌಲಿಂಗ್ ಆಯ್ಕೆ, ಕುತೂಹಲಕ್ಕೆ ಬ್ರೇಕ್, ವೆಂಕಟೇಶ್ ಅಯ್ಯರ್ ಗೆ ಸ್ಟಿಕ್ ಆದ RCB!

ಕರ್ನಾಟಕ ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆ ಘೋಷಣೆ; ಜೂನ್ 18 ರಂದು ಮತದಾನ

Bengaluru Rains: ಗುಡುಗು, ಸಿಡಿಲು ಸಹಿತ ಭಾರೀ ಮಳೆ; ಹಳಿ ಮೇಲೆ ಮರ ಬಿದ್ದು ಮೆಟ್ರೋ ಸಂಚಾರ ವ್ಯತ್ಯಯ!

ಮೇಕೆದಾಟು ಯೋಜನೆ ವಿರುದ್ಧ ತಮಿಳುನಾಡು ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿ ತಿರಸ್ಕಾರ: 'ಸುಪ್ರೀಂ' ತೀರ್ಪು ಸ್ವಾಗತಿಸಿದ ಡಿಕೆ ಶಿವಕುಮಾರ್

SCROLL FOR NEXT