ಬಿಬಿಎಂಪಿ ಕಾರ್ಪೊರೇಟರ್ ಗುರುಮೂರ್ತಿ ರೆಡ್ಡಿ ಹಾಗೂ ಹಲ್ಲೆಗೊಳಗಾದ ವ್ಯಕ್ತಿ 
ರಾಜ್ಯ

ಬೀದಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿದ ಪಾಲಿಕೆ ಸದಸ್ಯ?

ಕುಡಿದ ಅಮಲಿನಲ್ಲಿದ್ದ ಬಿಬಿಎಂಪಿ ಕಾರ್ಪೊರೇಟರ್ ಗುರುಮೂರ್ತಿ ರೆಡ್ಡಿ ಅವರು ಬೀದಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಹೆಚ್ಎಸ್ಆರ್ ಲೇಔಟ್ ನಲ್ಲಿ ಗುರುವಾರ...

ಬೆಂಗಳೂರು: ಕುಡಿದ ಅಮಲಿನಲ್ಲಿದ್ದ ಬಿಬಿಎಂಪಿ ಕಾರ್ಪೊರೇಟರ್ ಗುರುಮೂರ್ತಿ ರೆಡ್ಡಿ ಅವರು ಬೀದಿ ವ್ಯಾಪಾರಿ ಮೇಲೆ ಹಲ್ಲೆ ಮಾಡಿರುವ ಘಟನೆಯೊಂದು ಹೆಚ್ಎಸ್ಆರ್ ಲೇಔಟ್ ನಲ್ಲಿ ಗುರುವಾರ ನಡೆದಿರುವುದಾಗಿ ತಿಳಿದುಬಂದಿದೆ.

ಶಕ್ತಿ ಕುಮಾರ್ ಹಲ್ಲೆಗೊಳಗಾದ ವ್ಯಕ್ತಿ. ಹೆಚ್ಎಸ್ಆರ್ ಲೇಔಟ್ ನ 27ನೇ ಕ್ರಾಸ್ ನಲ್ಲಿ ಗಾಡಿಯಲ್ಲಿ ದೋಸೆ ಹೋಟೆಲ್ ವೊಂದನ್ನು ನಡೆಸುತ್ತಿದ್ದೇನೆ. ಗುರುವಾರ ಸಂಜೆ 7.30ರ ಸುಮಾರಿಗೆ ಗಾಡಿ ಬಳಿ ಬಂದ ರೆಡ್ಡಿ ಅವರು ವಾಹನವನ್ನು ಬೇರೆಡೆ ನಿಲ್ಲಿಸಿಕೊಳ್ಳುವಂತೆ ಗಲಾಟೆ ಮಾಡಿದರು. ಅಲ್ಲದೆ, ಗಾಡಿ ನಿಲ್ಲಿಸಲು ಹಣ ನೀಡುವಂತೆ ತಿಳಿಸಿದರು. ಇದಕ್ಕೆ ನಾನೇನೂ ಹೇಳಲಿಲ್ಲ.

ನಂತರ ಮತ್ತೆ ರಾತ್ರಿ 11 ಗಂಟೆಗೆ ಮದ್ಯ ಸೇವಿಸಿ ತಮ್ಮ ಸಹಚರರೊಂದಿಗೆ ಬಂದ ಅವರು, ಗಾಡಿ ತೆಗೆದಿಲ್ಲ ಎಂದು ಹೇಳಿ ನನ್ನ ಮೇಲೆ ಹಲ್ಲೆ ಮಾಡಿದರು ಎಂದು ಹಲ್ಲೆಗೊಳಗಾದ ಶಕ್ತಿ ಕುಮಾರ್ ಹೇಳಿಕೊಂಡಿದ್ದಾರೆ.

ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಗುರುಮೂರ್ತಿ ರೆಡ್ಡಿ ಅವರು, ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದ ವೇಳೆ ಗುಂಪೊಂದು ಶಕ್ತಿ ಎಂಬ ವ್ಯಕ್ತಿ ಮೇಲೆ ದಾಳಿ ಮಾಡುತ್ತಿರುವುದನ್ನು ನೋಡಿದ್ದೆ. ಈ ವೇಳೆ ಆತನಿಗೆ ಗುಂಪು ಥಳಿಸುತ್ತಿದ್ದರು. ಸ್ಥಳಕ್ಕೆ ಹೋದ ನಾನು ಯುವಕರಿಗೆ ಜಾಗ ಖಾಲಿ ಮಾಡುವಂತೆ ತಿಳಿಸಿ ಆತನನ್ನು ರಕ್ಷಿಸಿದ್ದೆ, ಅದರೆ, ಇದೀಗ  ನನ್ನ ವಿರುದ್ಧವೇ ಇಲ್ಲಸಲ್ಲದ ಆರೋಪ ಮಾಡಿ ದೂರು ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಹೆಚ್ಎಸ್ಆರ್ ಲೇ ಔಟ್ ಪೊಲೀಸರಿಗೆ ಸ್ಪಷ್ಟನೆ ನೀಡಿದ್ದೇನೆ. ನಾನು ಯಾವುದೇ ಹಣವನ್ನು ಕೇಳಿಲ್ಲ ಎಂದು ಹೇಳಿಕೊಂಡಿದ್ದಾರೆ.

ಸ್ಥಳೀಯರೊಬ್ಬರು ಮೊಬೈಲ್ ಫೋನಿನಲ್ಲಿ ಘಟನೆಯ ಸಂಪೂರ್ಣ ವಿಡಿಯೋ ಮಾಡಿದ್ದು, ಖಾಸಗಿ ಮಾಧ್ಯಮವೊಂದಕ್ಕೆ ಈ ವಿಡಿಯೋವನ್ನು ನೀಡಿದ್ದಾರೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಾಲಿಕೆ ಸದಸ್ಯನ ವಿರುದ್ಧ ಸಾಕಷ್ಟು ಟೀಕೆಗಳು ವ್ಯಕ್ತವಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT