ಇ-ಸಿಗರೇಟ್ 
ರಾಜ್ಯ

ಇ-ಸಿಗರೇಟ್ ನಿಷೇಧದದ ನಿರ್ಧಾರ ವಾಪಸ್ ಪಡೆಯಲಿದೆಯೇ ರಾಜ್ಯ ಸರ್ಕಾರ?

ಇ-ಸಿಗರೇಟ್ ನ್ನು ನಿಷೇಧ ಮಾಡಿದ್ದ ರಾಜ್ಯ ಸರ್ಕಾರ ಕೇವಲ 15 ದಿನಗಳಲ್ಲಿ ತನ್ನ ನಿರ್ಧಾರವನ್ನು ಬದಲಿಸುವ ಸಾಧ್ಯತೆ ಇದೆ.

ಬೆಂಗಳೂರು: ಇ-ಸಿಗರೇಟ್ ನ್ನು ನಿಷೇಧ ಮಾಡಿದ್ದ ರಾಜ್ಯ ಸರ್ಕಾರ ಕೇವಲ 15 ದಿನಗಳಲ್ಲಿ ತನ್ನ ನಿರ್ಧಾರವನ್ನು ಬದಲಿಸುವ ಸಾಧ್ಯತೆ ಇದೆ.

ತಂಬಾಕು ಬೆಳೆಗಾರರು ಜೂ.22 ರಂದು ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಸರ್ಕಾರದ ನಿರ್ಧಾರವನ್ನು ಮತ್ತೊಮ್ಮೆ ಪರಿಶೀಲನೆ ಮಾಡಬೇಕೆಂದು ಮನವಿ ಮಾಡಿರುವ ಹಿನ್ನೆಲೆಯಲ್ಲಿ ಈ ಬೆಳವಣಿಗೆ ನಡೆದಿದ್ದು ಇ-ಸಿಗರೇಟ್ ನ್ನು ನಿಷೇಧ ಮಾಡಿರುವ ಬಗ್ಗೆ ಸರ್ಕಾರ ಆರೋಗ್ಯ ಇಲಾಖೆಯಿಂದ ಮತ್ತೊಮ್ಮೆ ಸ್ಪಷ್ಟಿಕರಣ ಕೇಳಿದೆ.

ಜೂ.15 ರಂದು ಸರ್ಕಾರ ಹೊರಡಿಸಿದ್ದ ಆದೇಶದ ಪ್ರಕಾರ ನಿಕೋಟಿನ್ ಮೊದಲಾದ ರಾಸಾಯನಿಕ ವಸ್ತುಗಳನ್ನು ಒಳಗೊಂಡಿರುವ ದ್ರವದ ಕಾರ್ಟಿಜ್ ಅನ್ನು ಹೊಂದಿರುವ ಇ-ಸಿಗರೇಟ್ ನ್ನು ಮಾರಾಟ(ಆನ್ ಲೈನ್ ಸೇರಿದಂತೆ) ಮಾಡುವುದು, ರಫ್ತು ಮಾಡುವುದನ್ನು ನಿಷೇಧಿಸಲಾಗಿತ್ತು. ಆದರೆ ಈಗ ಸರ್ಕಾರ ಉಲ್ಟಾ ಹೊಡೆದಿದ್ದು ನಿಷೇಧಕ್ಕೆ ಮತ್ತೊಮ್ಮೆ ಕಾರಣವನ್ನು ವಿವರಿಸುವಂತೆ ಸರ್ಕಾರ ಆರೋಗ್ಯ ಇಲಾಖೆಗೆ ಸೂಚನೆ ನೀಡಿದೆ.

" ಸರ್ಕಾರ ಇ-ಸಿಗರೇಟ್ ನ್ನು ನಿಷೇಧಿಸುವ ಆದೇಶ ಹೊರಡಿಸಿದ 15 ದಿನಗಳಲ್ಲಿ, ನಿಷೇಧಕ್ಕೆ ಕಾರಣವನ್ನು ಮತ್ತೊಮ್ಮೆ ವಿವರಿಸುವಂತೆ ಸೂಚನೆ ನೀಡಿರುವುದು ಅಚ್ಚರಿ ಮೂಡಿಸಿದೆ. ಇ-ಸಿಗರೇಟ್ ಗಳಲ್ಲೂ ನಿಕೋಟಿನ್ ಬಳಕೆ ಮಾಡಲಾಗುತ್ತಿದೆ. ಆದರೂ ಸರ್ಕಾರ ನಿಷೇಧದ ಕುರಿತು ಕಾರಣ ಕೇಳಿರುವುದು ಅಚ್ಚರಿ ಮೂಡಿಸಿದೆ ಎಂದು ಆರೋಗ್ಯ ಇಲಾಖೆ ಹೇಳಿದೆ. ಜೂ.15 ರಂದು ತಕ್ಷಣದಿಂದಲೇ ಜಾರಿಗೆ ಬರುವಂತೆ ಇ-ಸಿಗರೇಟ್ ಮಾರಾಟ, ವಿತರಣೆ ಮತ್ತು ಉತ್ಪಾದನೆಯನ್ನು ನಿಷೇಧಿಸಲಾಗಿದೆ ಎಂದು ಆರೋಗ್ಯ ಸಚಿವ ಯುಟಿ ಖಾದರ್ ಅವರು ಅಧಿಕೃತವಾಗಿ ಘೋಷಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT