ಕೆಎಸ್ಆರ್ ಟಿಸಿ (ಸಂಗ್ರಹ ಚಿತ್ರ) 
ರಾಜ್ಯ

ಜುಲೈ.25 ರಿಂದ ಕೆಎಸ್ಆರ್'ಟಿಸಿ ಸಿಬ್ಬಂದಿಗಳ ಅನಿರ್ಧಿಷ್ಟಾವಧಿ ಮುಷ್ಕರ

ವೇತನ ಹೆಚ್ಚಳ ಹಾಗೂ ಇನ್ನಿತರೆ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ ಟಿಸಿ)ದ ಸಿಬ್ಬಂದಿಗಳು ಜುಲೈ.25 ರಿಂದ ಅನಿರ್ಧಿಷ್ಟಾವಧಿ ಮುಷ್ಕರ...

ಬೆಂಗಳೂರು; ವೇತನ ಹೆಚ್ಚಳ ಹಾಗೂ ಇನ್ನಿತರೆ ಬೇಡಿಕೆ ಈಡೇರಿಕೆಗೆ ಅಗ್ರಹಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್ ಟಿಸಿ)ದ ಸಿಬ್ಬಂದಿಗಳು ಜುಲೈ.25 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

ಈ ಕುರಿತಂತೆ ಮಾತನಾಡಿರುವ ಕೆಎಸ್ಆರ್ ಟಿಸಿ ಸ್ಟಾಫ್ ಅ್ಯಂಡ್ ವರ್ಕರ್ಸ್ ಫೆಡರೇಷನ್ ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಅನಂತಸುಬ್ಬರಾವ್ ಅವರು, ರಾಜ್ಯ ಸರ್ಕಾರ 4 ಸಾರಿಗೆ ನಿಗಮಗಳ ನೌಕರರ ವೇತನವನ್ನು ಅವೈಜ್ಞಾನಿಕವಾಗಿ ಪರಿಷ್ಕರಣೆ ಮಾಡಿದೆ. ನೌಕರರ ಸಂಘಟನೆಗಳ ಜತೆಗೆ ಚರ್ಚೆ ನಡೆಸದೆಯೇ ಏಕಾಏಕಿ ಶೇ.8 ರಷ್ಟು ವೇತನ ಹೆಚ್ಚಳ ಮಾಡಿದೆ ಎಂದು ಹೇಳಿದ್ದಾರೆ.

ನಿರ್ಧಾರ ಕೈಗೊಳ್ಳುವುದಕ್ಕೂ ಮುನ್ನ ಸಂಘಟನೆಗಳೊಂದಿಗೆ ಸರ್ಕಾರ ಚರ್ಚೆ ನಡೆಸಿಲ್ಲ. ಸರ್ಕಾರದ ಈ ನಿಲುವಿಗೆ ವಿರೋಧ ವ್ಯಕ್ತಪಡಿಸುತ್ತೇವೆ. ಶೀಘ್ರದಲ್ಲಿ ವೇತನವನ್ನು ಶೇ.35ಕ್ಕೆ ಏರಿಕೆ ಮಾಡದಿದ್ದರೆ, ಜುಲೈ. 25 ರಿಂದ ಅನಿರ್ಧಿಷ್ಟಾವಧಿ ಮುಷ್ಕರ ಮಾಡಲಾಗುತ್ತದೆ ಎಂದಿದ್ದಾರೆ.

ನಮ್ಮ ಮುಷ್ಕರಕ್ಕೆ ಇನ್ನಿತರೆ ಸಂಘಟನೆಗಳ ಸಹಕಾರ ಕೇಳಲಾಗಿದೆ. ಪ್ರತಿಭಟನೆಯಲ್ಲಿ 1.25 ಲಕ್ಷ ಸಿಬ್ಬಂದಿಗಳು ಪಾಲ್ಗೊಳ್ಳಲಿದ್ದಾರೆ. ಸಮಸ್ಯೆ ಕುರಿತಂತೆ ಅಧಿಕಾರಿಗಳು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಮಾತುಕತೆ ನಡೆಸಿದ್ದರು. ಆದರೆ, ಸಭೆಯಲ್ಲಿ ಯಾವುದೇ ಬೆಳವಣಿಗೆಗಳು ಕಂಡುಬಂದಿಲ್ಲ.

ಸಿದ್ದರಾಮಯ್ಯ ಅವರು ಕೆಎಸ್ಆರ್ ಟಿಸಿ ಸಿಬ್ಬಂದಿಗಳ ಸಮಸ್ಯೆ ಆಲಿಸುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ಕುರಿತಂತೆ ಈಗಾಗಲೇ ರಾಜ್ಯ ಸರ್ಕಾರಕ್ಕೆ ನೋಟಿಸ್ ಕೂಡ ಜಾರಿ ಮಾಡಲಾಗಿದೆ. ರಾಜ್ಯ ಸರ್ಕಾರದಿಂದ ಒಂದು ವೇಳೆ ಧನಾತ್ಮಕ ಪ್ರತಿಕ್ರಿಯೆ ಬರದಿದ್ದರೆ, ಜುಲೈ. 25 ರಿಂದ ಅನಿರ್ಧಾಷ್ಟಾವಧಿ ಪ್ರತಿಭಟನೆ ನಡೆಸಲಾಗುತ್ತದೆ.

ವೇತನ ಪರಿಷ್ಕರಣೆ ನಮ್ಮ ಪ್ರಮುಖ ಆಗ್ರಹವಾಗಿದೆ. ಅಲ್ಲದೆ. ವೈದ್ಯಕೀಯ ಸೌಲಭ್ಯ, ಮಹಿಳೆಯರಿಗೆ ವಿಶ್ರಾಂತಿ ಕೊಠಡಿ ಸೇರಿದಂತೆ ಇನ್ನು 41 ಆಗ್ರಹಗಳಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT