ಮರಿಗೌಡ ಅವರನ್ನು ಬಂಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ 
ರಾಜ್ಯ

ಡಿಸಿಗೆ ಬೆದರಿಕೆ ಪ್ರಕರಣ: ಶಿಖಾ ಪತಿ, ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮರಿಗೌಡ ರಾಜಿ ಯತ್ನ

ತಹಶೀಲ್ದಾರ್ ಒಬ್ಬರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸಿ, ಶಿಖಾ ಅವರಿಗೆ ಬೆದರಿಕೆ ಹಾಕಿದ್ದ, ಸಿಎಂ ಆಪ್ತ ಹಾಗೂ ಮೈಸೂರು ಜಿಲ್ಲಾ...

ಮೈಸೂರು: ತಹಶೀಲ್ದಾರ್ ಒಬ್ಬರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸಿ, ಶಿಖಾ ಅವರಿಗೆ ಬೆದರಿಕೆ ಹಾಕಿದ್ದ, ಸಿಎಂ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಮರಿಗೌಡ ವಿರುದ್ಧ ಶಿಖಾ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮರಿಗೌಡ ನಾಪತ್ತೆಯಾಗಿದ್ದು, ರಾಜಿ ಸಂಧಾನಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶಿಖಾ ಅವರ ಪತಿ ಅಜಯ್ ನಾಗಭೂಷಣ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಆದರೆ ಅಜಯ್ ನಾಗಭೂಷಣ್ ಮರಿಗೌಡ ಅವರಿಗೆ ಯಾವುದೇ ಭರವಸೆ ನೀಡಿಲ್ಲ, ಕಾನೂನಿಗೆ ತನ್ನದೆ ನೀತಿ ನಿಯಮಗಳಿವೆ, ಅದರಂತೆ ನಡೆಯಬೇಕು ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಿ ಸಂಧಾನಕ್ಕೆ ಜಿಲ್ಲಾಧಿಕಾರಿ ಒಪ್ಪದಿರುವ ಹಿನ್ನೆಲೆಯಲ್ಲಿ ಮರಿಗೌಡ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನೂ ಮರಿಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮಾಧ್ಯಮಗಳಿಗೆ ಸಿಗುತ್ತಿಲ್ಲ.

2013 ರ ವಿಧಾನ ಸಭೆ ಚುನಾವಣೆ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ ತಪ್ಪಿದ್ದಕ್ಕೆ ಮರಿಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿರುವ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಜಿಲ್ಲಾಧಿಕಾರಿ ಶಿಖಾ ಅವರಿಗೆ ಬೆದರಿಕೆ ಹಾಕಿರುವ ಮರಿಗೌಡ ಅವರನ್ನು ಮೂರು ದಿನ ಕಳೆದರು ಬಂಧಿಸಲಿಲ್ಲ, ಹೀಗಾಗಿ ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಮರಿಗೌಡ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ದ್ರಾವಿಡ ಮಹಾಸಭಾ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT