ಮರಿಗೌಡ ಅವರನ್ನು ಬಂಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ 
ರಾಜ್ಯ

ಡಿಸಿಗೆ ಬೆದರಿಕೆ ಪ್ರಕರಣ: ಶಿಖಾ ಪತಿ, ಮಂಡ್ಯ ಜಿಲ್ಲಾಧಿಕಾರಿ ಮೂಲಕ ಮರಿಗೌಡ ರಾಜಿ ಯತ್ನ

ತಹಶೀಲ್ದಾರ್ ಒಬ್ಬರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸಿ, ಶಿಖಾ ಅವರಿಗೆ ಬೆದರಿಕೆ ಹಾಕಿದ್ದ, ಸಿಎಂ ಆಪ್ತ ಹಾಗೂ ಮೈಸೂರು ಜಿಲ್ಲಾ...

ಮೈಸೂರು: ತಹಶೀಲ್ದಾರ್ ಒಬ್ಬರ ವರ್ಗಾವಣೆ ವಿಷಯಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾಧಿಕಾರಿ ಸಿ, ಶಿಖಾ ಅವರಿಗೆ ಬೆದರಿಕೆ ಹಾಕಿದ್ದ, ಸಿಎಂ ಆಪ್ತ ಹಾಗೂ ಮೈಸೂರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಕೆ. ಮರಿಗೌಡ ವಿರುದ್ಧ ಶಿಖಾ ದೂರು ದಾಖಲಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಮರಿಗೌಡ ನಾಪತ್ತೆಯಾಗಿದ್ದು, ರಾಜಿ ಸಂಧಾನಕ್ಕಾಗಿ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶಿಖಾ ಅವರ ಪತಿ ಅಜಯ್ ನಾಗಭೂಷಣ್ ಅವರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ.

ಆದರೆ ಅಜಯ್ ನಾಗಭೂಷಣ್ ಮರಿಗೌಡ ಅವರಿಗೆ ಯಾವುದೇ ಭರವಸೆ ನೀಡಿಲ್ಲ, ಕಾನೂನಿಗೆ ತನ್ನದೆ ನೀತಿ ನಿಯಮಗಳಿವೆ, ಅದರಂತೆ ನಡೆಯಬೇಕು ಎಂದು ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ರಾಜಿ ಸಂಧಾನಕ್ಕೆ ಜಿಲ್ಲಾಧಿಕಾರಿ ಒಪ್ಪದಿರುವ ಹಿನ್ನೆಲೆಯಲ್ಲಿ ಮರಿಗೌಡ ಜಾಮೀನಿಗಾಗಿ ಹೈಕೋರ್ಟ್ ಮೊರೆ ಹೋಗಿದ್ದಾರೆ ಎನ್ನಲಾಗಿದೆ. ಇನ್ನೂ ಮರಿಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದ್ದು, ಮಾಧ್ಯಮಗಳಿಗೆ ಸಿಗುತ್ತಿಲ್ಲ.

2013 ರ ವಿಧಾನ ಸಭೆ ಚುನಾವಣೆ ವೇಳೆ ಚಾಮುಂಡೇಶ್ವರಿ ಕ್ಷೇತ್ರದ ಟಿಕೆಟ್ ತಪ್ಪಿದ್ದಕ್ಕೆ ಮರಿಗೌಡ ಸಿಎಂ ಸಿದ್ದರಾಮಯ್ಯ ವಿರುದ್ಧ ಅಸಮಾಧಾನ ಹೊರಹಾಕಿರುವ ಆಡಿಯೋ ಕ್ಲಿಪ್ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ಜಿಲ್ಲಾಧಿಕಾರಿ ಶಿಖಾ ಅವರಿಗೆ ಬೆದರಿಕೆ ಹಾಕಿರುವ ಮರಿಗೌಡ ಅವರನ್ನು ಮೂರು ದಿನ ಕಳೆದರು ಬಂಧಿಸಲಿಲ್ಲ, ಹೀಗಾಗಿ ಕೂಡಲೇ ಅವರನ್ನು ಬಂಧಿಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಮಂಜುಳಾ ಮಾನಸ ಮರಿಗೌಡ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ರಾಜ್ಯ ದ್ರಾವಿಡ ಮಹಾಸಭಾ ಮೈಸೂರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!