ಬೆಂಗಳೂರು ವಿಶ್ವವಿದ್ಯಾಲಯ 
ರಾಜ್ಯ

ಹೆಚ್ಚಿನ ಸಿಸಿಟಿವಿ ಅಳವಡಿಕೆಗೆ ಪೊಲೀಸರ ಮನವಿ: ನಿರ್ಧಾರ ಕೈಗೊಳ್ಳದ ಬೆಂಗಳೂರು ವಿವಿ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡುವಂತೆ ರಾಜ್ಯ ಪೊಲೀಸರು ಮನವಿ ಮಾಡಿದ್ದು...

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡುವಂತೆ ರಾಜ್ಯ ಪೊಲೀಸರು ಮನವಿ ಮಾಡಿದ್ದು, ಈ ವರೆಗೂ ಬೆಂಗಳೂರು ವಿಶ್ವವಿದ್ಯಾಲಯ ಯಾವುದೇ ರೀತಿಯ ನಿರ್ಧಾರಗಳನ್ನು ಕೈಗೊಳ್ಳುತ್ತಿಲ್ಲ ಎಂದು ಮಾತುಗಳು ಕೇಳಿಬರುತ್ತಿವೆ.

ಹೆಚ್ಚುತ್ತಿರುವ ಅಪರಾಧ ಪ್ರಕರಣ ಹಿನ್ನೆಲೆಯಲ್ಲಿ ಜ್ಞಾನಭಾರತಿ ಪೊಲೀಸರು ಬೆಂಗಳೂರು ವಿಶ್ವವಿದ್ಯಾಲಯದ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಸಿಸಿಟಿವಿ ಅಳವಡಿಕೆ ಮಾಡುವಂತೆ ಮನವಿ ಮಾಡಿದೆ. ಎಲ್ಲೆಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡಬೇಕೆಂಬ ಮಾದರಿ ತಾಣಗಳನ್ನು ಪೊಲೀಸರು ಗುರ್ತಿಸಿದ್ದು, ಆ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಕೆ ಮಾಡುವಂತೆ ತಿಳಿಸಿದ್ದಾರೆಂದು ತಿಳಿದುಬಂದಿದೆ.

ವಿಶ್ವವಿದ್ಯಾಲಯ ಆವರಣದಲ್ಲಿ ಈಗಾಗಲೇ 8 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ವಿವಿ ಆವರಣದ ಮೇಲೆ ಹೆಚ್ಚಿನ ಕಣ್ಗಾವಲಿರಿಸುವ ಸಲುವಾಗಿ ಮತ್ತೆ 8 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸುವಂತೆ ಪೊಲೀಸರು ಮನವಿ ಮಾಡಿಕೊಂಡಿದ್ದಾರೆಂದು ವಿಶ್ವವಿದ್ಯಾಲಯದ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ಈ ವರೆಗೂ ನಿರ್ಧಾರ ಕೈಗೊಳ್ಳದ ವಿವಿ...
ವಿಶ್ವವಿದ್ಯಾಲಯದ ಆವರಣದಲ್ಲಿ ಈಗಾಗಲೇ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು, ಹೆಚ್ಚಿನ ಕಣ್ಗಾವಲಿರಿಸುವ ಅವಶ್ಯಕತೆ ಇಲ್ಲ ಎಂದು ಬೆಂಗಳೂರು ವಿಶ್ವವಿದ್ಯಾಲಯ ಹೇಳಿಕೊಂಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಿಶ್ವವಿದ್ಯಾಲಯ 2015-16 ರಲ್ಲಿ ಸಿಸಿಟಿವಿ ಅಳವಡಿಕೆಗಾಗಿ ರು. 10 ಲಕ್ಷ ಹಣವನ್ನು ಖರ್ಚು ಮಾಡಿದೆ. ಪ್ರಸ್ತುತ ಪೊಲೀಸರು ಸಲಹೆ ನೀಡಿರುವ ಸಿಸಿಟಿವಿ ಕ್ಯಾಮೆರಾಗಳು ದುಬಾರಿಯಾದ್ದಾಗಿದೆ. ರಾತ್ರಿ ದೃಶ್ಯಗಳನ್ನು ಸೆರೆಹಿಡಿಯುವ ಸಿಸಿಟಿವಿಗಳನ್ನು ಅಳವಡಿಸಬೇಕೆಂದು ಪೊಲೀಸರು ಸ್ಪಷ್ಟವಾಗಿ ಹೇಳಿದ್ದಾರೆ. ವಿಶ್ವವಿದ್ಯಾಲಯ ಈಗಾಗಲೇ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಸಿಸಿಟಿವಿ ಅಳವಡಿಕೆ ಕಷ್ಟವಾಗುತ್ತದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT