ಸವದತ್ತಿ ತಾಲೂಕಿನ ಮುರ್ಗುಡ್ ಗ್ರಾಮಕ್ಕೆ ಸಿಐಡಿ ವಿಭಾಗದ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ತಂಡ ಭೇಟಿ ನೀಡಿ ತನಿಖೆ ನಡೆಸುತ್ತಿರುವುದು. 
ರಾಜ್ಯ

ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ತನಿಖೆ ಆರಂಭಿಸಿದ ಸಿಐಡಿ ಅಧಿಕಾರಿಗಳು

ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಹಾಗೂ ಅಪಹರಣ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವರ್ಗಾಯಿಸಲಾಗಿದ್ದು, ಸಿಐಡಿ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ...

ಬೆಳಗಾವಿ: ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಆತ್ಮಹತ್ಯೆ ಹಾಗೂ ಅಪಹರಣ ಪ್ರಕರಣವನ್ನು ಸಿಐಡಿಗೆ ತನಿಖೆಗೆ ವರ್ಗಾಯಿಸಲಾಗಿದ್ದು, ಸಿಐಡಿ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ.

ನಿನ್ನೆಯಷ್ಟೇ ಸವದತ್ತಿ ತಾಲೂಕಿನ ಮುರ್ಗುಡ್ ಗ್ರಾಮಕ್ಕೆ ಸಿಐಡಿ ವಿಭಾಗದ ಡಿಐಜಿ ಸೋನಿಯಾ ನಾರಂಗ್ ನೇತೃತ್ವದ ತಂಡ ಭೇಟಿ ನೀಡಿದ್ದು, ತನಿಖೆ ಆರಂಭಿಸಿದ್ದಾರೆ.

ತನಿಖೆ ವೇಳೆ ಸೋನಿಯಾ ಅವರು ಕಲ್ಲಪ್ಪ ಅವರ ಪತ್ನಿ ವಿದ್ಯಾ, ತಂದೆ ಹಾಗೂ ಇತರೆ ಕುಟುಂಬಸ್ಥರನ್ನು ವಿಚಾರಣೆ ನಡೆಸಿದ್ದಾರೆ. ಕಲ್ಲಪ್ಪ ಅವರ ಮರಣೋತ್ತರ ವರದಿಗಾಗಿ ಸಿಐಡಿ ಕಾಯುತ್ತಿದೆ ಎಂದು ಸೋನಿಯಾ ನಾರಂಗ್ ಅವರು ಹೇಳಿದ್ದು, ಇನ್ನಿತರೆ ಮಾಹಿತಿ ನೀಡಲು ನಿರಾಕರಿಸಿದ್ದಾರೆ.

ಮೂಲಗಳ ಪ್ರಕಾರ ಚಿಕ್ಕಮಗಳೂರು ಅಪಹರಣ ಪ್ರಕರಣ ಸಂಬಂಧ ಅಧಿಕಾರಿಗಳು ಈಗಾಗಲೇ ನಾಲ್ವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ. ಇದಲ್ಲದೆ, ಪ್ರತ್ಯೇಕ ಸಿಐಡಿ ತಂಡವೊಂದು ಅಪಹರಣ ಪ್ರಕರಣ ಕುರಿತು ತನಿಖೆ ನಡೆಸುತ್ತಿರುವುದಾಗಿ ಹೇಳಲಾಗುತ್ತಿದೆ.

ವಿಚಾರಣೆ ವೇಳೆ ಕಲ್ಲಪ್ಪ ಅವರ ಪತ್ನಿ ವಿದ್ಯಾ ಅವರು ಹೇಳಿಕೆ ನೀಡಿದ್ದು, ಪತಿಯ ಪ್ರಮಾಣಿಕತೆ ಅವರಿಗೆ ಸಮಸ್ಯೆಯುಂಟು ಮಾಡಿ, ಅವರ ಜೀವಕ್ಕೆ ಮುಳುವಾಯಿತು. ನನ್ನ ಪತಿ ಚಿಕ್ಕಮಗಳೂರಿನಲ್ಲಿ ಕಳೆದ 2 ವರ್ಷಗಳಿಂದಲೂ ನೆಲೆಯೂರಿದ್ದು, ಹೊರಗೆ ಆಗಲಿ ಅಥವಾ ಪೊಲೀಸ್ ಇಲಾಖೆಯಲ್ಲಿಯೇ ಆಗಲೀ ಒಬ್ಬ ವ್ಯಕ್ತಿ ಕೂಡ ಅವರ ಬಗ್ಗೆ ದೂರು ನೀಡಿರಲಿಲ್ಲ ಎಂದು ಹೇಳಿಕೊಂಡಿದ್ದಾರೆಂದು ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

SCROLL FOR NEXT