ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ 
ರಾಜ್ಯ

ಡಿಸಿ ಬೆದರಿಕೆ ಪ್ರಕರಣ: ಜಿಲ್ಲಾಧಿಕಾರಿ ವಾಹನ ಚಾಲಕ, ಗನ್ ಮ್ಯಾನ್ ಹೇಳಿಕೆ ದಾಖಲು

ಮುಖ್ಯಮಂತ್ರಿ ಆಪ್ತ ಗೆಳೆಯ ಮರೀಗೌಡ ಅವರು ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಜಾರ್ ಬಾದ್ ಪೊಲೀಸರು ಶಿಖಾ ಅವರ ವಾಹನ ಚಾಲಕ ಹಾಗೂ...

ಮೈಸೂರು: ಮುಖ್ಯಮಂತ್ರಿ ಆಪ್ತ ಗೆಳೆಯ ಮರೀಗೌಡ ಅವರು ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಜಾರ್ ಬಾದ್ ಪೊಲೀಸರು ಶಿಖಾ ಅವರ ವಾಹನ ಚಾಲಕ ಹಾಗೂ ಗನ್ ಮ್ಯಾನ್ ಹೇಳಿಕೆಯನ್ನು ದಾಖಲು ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.

ಜಿಲ್ಲಾಧಿಕಾರಿ ಪ್ರಕರಣವನ್ನು ನಜಾರ್ ಬಾದ್ ಪೊಲೀಸರು ತನಿಖೆ ನಡೆಸುತ್ತಿದ್ದು, ಇದರಂತೆ ತನಿಖೆ ಕೈಗೊಂಡಿರುವ ಎಸಿಬಿ ಬಿ.ಎಸ್. ರಾಜಶೇಖರ್ ಅವರು. ಶಿಖಾ ಅವರ ಗನ್ ಮ್ಯಾನ್ ಆಗಿರುವ ತಂಗವೇಲು ಹಾಗೂ ಕಾರು ಚಾಲಕನ ಹೇಳಿಕೆಗಳನ್ನು ದಾಖಲು ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.

ಮರೀಗೌಡ ಅವರು ಜಿಲ್ಲಾಧಿಕಾರಿ ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣ ಇದೀಗ ವಿಧಾನಮಂಡಲದಲ್ಲೂ ಸದ್ದು ಮಾಡುತ್ತಿದ್ದು, ವಿರೋಧ ಪಕ್ಷಗಳು ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿವೆ. ಮೈಸೂರಿನಲ್ಲಿ ಬಿಜೆಪಿ ಕಾರ್ಯಕರ್ತರೂ ಕೂಡ ಪ್ರತಿಭಟನೆ ನಡೆಸುತ್ತಿದ್ದು, ಮರೀಗೌಡ ಅವರ ಬಂಧನದಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗುತ್ತಿವೆ.

ಈ ಮಧ್ಯೆಯೇ ಮರೀಗೌಡ ಅವರನ್ನು ಬಂಧನಕ್ಕೊಳಪಡಿಸದಂತೆ ನಗರ ಪೊಲೀಸರ ಮೇಲೆ ಒತ್ತಡ ಹೆಚ್ಚಾಗುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT