ಮರೀಗೌಡ 
ರಾಜ್ಯ

ವಿಚಾರಣೆಗೆ ಹಾಜರಾಗುವಂತೆ ಮರೀಗೌಡಗೆ ನೋಟಿಸ್ ಜಾರಿ

ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಗೆಳೆಯ ಮರೀಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಪೊಲೀಸರು...

ಮೈಸೂರು: ಮೈಸೂರು ಜಿಲ್ಲಾಧಿಕಾರಿಗೆ ಬೆದರಿಕೆ ಹಾಕಿ ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಗೆಳೆಯ ಮರೀಗೌಡ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ರಾಜ್ಯ ಪೊಲೀಸರು ಗುರುವಾರ ನೋಟಿಸ್ ಜಾರಿ ಮಾಡಿರುವುದಾಗಿ ತಿಳಿದುಬಂದಿದೆ.

ಮೈಸೂರಿನ ರಾಮಕೃಷ್ಣ ನಗರದಲ್ಲಿರುವ ಮರೀಗೌಡ ನಿವಾಸಕ್ಕೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದು, ಶೀಘ್ರಗತಿಯಲ್ಲಿ ವಿಚಾರಣೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.

ಕಳೆದ ಭಾನುವಾರ ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಅವರಿಗೆ ಬೆದರಿಕೆ ಹಾಗೂ ಕರ್ತವ್ಯಕ್ಕೆ ಅಡ್ಡಿ ಪಡಿಸಿದ್ದ ಮರೀಗೌಡ ಅವರು, ಅವಾಚ್ಯ ಶಬ್ಧಗಳಿಂದ ಅಧಿಕಾರಿಯನ್ನು ನಿಂದಿಸಿದ್ದರು ಎಂದು ಹೇಳಿ ನಜರ್ ಬಾದ್ ಠಾಣೆಯಲ್ಲಿ ಪ್ರಕರಣವೊಂದು ದಾಖಲಾಗಿತ್ತು. ಇದರಂತೆ ತನಿಖೆ ಕೈಗೊಂಡ ಪೊಲೀಸರು ಮರೀಗೌಡ ಅವರಿಗಾಗಿ ಹುಡುಕಾಟ ಆರಂಭಿಸಿದ್ದು, ಈ ವರೆಗೂ ಮರೀಗೌಡ ಅವರು ದೊರಕಿಲ್ಲ.

ಈ ಮಧ್ಯೆಯೇ ಮರೀಗೌಡ ಅವರು ತಮ್ಮ ಪರ ವಕೀಲರ ಮೂಲಕ ಮೈಸೂರಿನ 7ನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲದಲ್ಲಿ ನಿರೀಕ್ಷಣಾ ಜಾಮೀರು ಕೋರಿ ಅರ್ಜಿಯೊಂದನ್ನು ಸಲ್ಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT