ಎಂಕೆ ಗಣಪತಿ ಅಂತ್ಯಸಂಸ್ಕಾರ 
ರಾಜ್ಯ

ಡಿವೈಎಸ್ಪಿ ಎಂಕೆ ಗಣಪತಿ ಪಂಚಭೂತಗಳಲ್ಲಿ ಲೀನ

ಹಿರಿಯ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಿನ್ನೆ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದ...

ಮಡಿಕೇರಿ: ಹಿರಿಯ ಅಧಿಕಾರಿಗಳು ಹಾಗೂ ಪ್ರಭಾವಿ ರಾಜಕಾರಣಿಯೊಬ್ಬರು ತಮಗೆ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ನಿನ್ನೆ ಸಂಜೆ ಆತ್ಮಹತ್ಯೆಗೆ ಶರಣಾಗಿದ್ದ ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂಕೆ ಗಣಪತಿ ಅವರು ಶುಕ್ರವಾರ ಪಂಚಭೂತಗಳಲ್ಲಿ ಲೀನವಾಗಿದ್ದಾರೆ.
ಇಂದು ಮಧ್ಯಾಹ್ನ ಮಡಿಕೇರಿಯ ಸೋಮವಾರಪೇಟೆ ತಾಲೂಕಿನ ರಂಗನಸಮುದ್ರ ಗ್ರಾಮದ ತೋಟದ ಮನೆಯಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಗಣಪತಿ ಅವರ ಅಂತ್ಯಸಂಸ್ಕಾರ ನಡೆಯಿತು.
ಕೊಡವ ಸಂಪ್ರದಾಯದಂತೆ ಅಂತಿಮ ವಿಧಿ, ವಿಧಾನ ನೆರವೇರಿಸಲಾಯಿತು. ಗಣಪತಿ ಹಿರಿಯ ಪುತ್ರ ನೇಹಲ್ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. ಅಂತ್ಯಕ್ರಿಯೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಕೊಡಗು ಜಿಲ್ಲಾಧಿಕಾರಿ, ಗಣಪತಿ ತಂದೆ ಕುಶಾಲಪ್ಪ, ಸಹೋದರ, ಪತ್ನಿ, ಪುತ್ರರು ಹಾಗೂ ಸಂಬಂಧಿಗಳು ಪಾಲ್ಗೊಂಡಿದ್ದರು.
ಎಂಕೆ ಗಣಪತಿ ಅವರು ನಿನ್ನೆ ಮಡಿಕೇರಿ ವಿನಾಯಕ ಲಾಡ್ಜ್ ನಲ್ಲಿ ನೇಣಿಗೆ ಶರಣಾಗಿದ್ದರು. ನೇಣಿಗೆ ಶರಣಾಗುವ ಮುನ್ನ ನನ್ನ ಸಾವಿಗೆ ಹಿಂದಿನ ಗೃಹಸಚಿವ ಕೆ.ಜೆ. ಜಾರ್ಜ್, ಐಜಿಪಿ ಪ್ರಣವ್ ಮೊಹಂತಿ, ಎಡಿಜಿಪಿ ಎಎಂ ಪ್ರಸಾದ್ ಕಾರಣ ಎಂದು ಆರೋಪಿಸಿದ್ದರು.
ಗಣಪತಿ ಅವರು ನೀಡಿರುವ ಹೇಳಿಕೆ ಇದೀಗ ರಾಜಕೀಯ ವಲಯ ಹಾಗೂ ಪೊಲೀಸ್ ಇಲಾಖೆಯಲ್ಲಿ ತೀವ್ರ ಸಂಚಲನಕ್ಕೆ ಕಾರಣವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್