ಡಿಐಜಿ ಓಂ ಪ್ರಕಾಶ್ 
ರಾಜ್ಯ

ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ: ಸಿಎಂಗೆ ಪ್ರಾಥಮಿಕ ತನಿಖಾ ವರದಿ ಸಲ್ಲಿಸಿದ ಡಿಐಜಿ

ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಡಿಐಜಿ ಓಂ ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ...

ಬೆಂಗಳೂರು: ಮಂಗಳೂರು ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖಾ ವರದಿಯನ್ನು ಡಿಐಜಿ ಓಂ ಪ್ರಕಾಶ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಲ್ಲಿಕೆ ಮಾಡಿರುವುದಾಗಿ ಶುಕ್ರವಾರ ತಿಳಿದುಬಂದಿದೆ.

ನಗರದಲ್ಲಿರುವ ಮುಖ್ಯಮಂತ್ರಿ ಗೃಹ ಕಚೇರಿ ಕೃಷ್ಣಾಗೆ ಈಗಾಗಲೇ ಭೇಟಿ ನೀಡಿರುವ ಡಿಐಜಿ ಓಂ ಪ್ರಕಾಶ್ ಅವರು, ಗಣಪತಿ ಅವರ ಆತ್ಮಹತ್ಯೆ ಪ್ರಕರಣದ ಪ್ರಾಥಮಿಕ ತನಿಖಾ ವರದಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ. ಅಲ್ಲದೆ, ಪ್ರಕರಣದ ಕುರಿತಂತೆ ಮಾತುಕತೆ ನಡೆಸಿದ್ದಾರೆಂದು ಹೇಳಲಾಗುತ್ತಿದೆ.

ಮಂಗಳೂರು ಕೊಡಗು ಮೂಲದ, ಮಂಗಳೂರು ಐಜಿ ಕಚೇರಿ ಡಿವೈಎಸ್ಪಿ ಎಂ.ಕೆ. ಗಣಪತಿ (45) ಅವರು ಗುರುವಾರ ಸಂಜೆ ಆತ್ಮಹತ್ಮೆಗೆ ಶರಣಾಗಿದ್ದರು. ಆತ್ಮಹತ್ಯೆಗೂ ಮುನ್ನ ಗಣಪತಿಯವರು ಖಾಸಗಿ ವಾಹನಿಯೊಂದಕ್ಕೆ ಸಂದರ್ಶನ ನೀಡಿದ್ದರು.

ಸಚಿವರು ಹಾಗೂ ಹಿರಿಯ ಅಧಿಕಾರಿಗಳು ಕಿರುಕುಳ ನೀಡುತ್ತಿರುವುದಾಗಿ ಹೇಳಿಕೊಂಡಿದ್ದರು ಅಲ್ಲದೆ, ಸಾವಿಗೂ ಮುನ್ನ ಡೆತ್ ನೋಟ್ ನ್ನು ಬರೆದಿಟ್ಟಿದ್ದರು. ಡೆತ್ ನೋಟ್ ನಲ್ಲಿರುವ ಅಂಶವನ್ನು ಬಹಿರಂಗಗೊಳಿಸಲು ಅಧಿಕಾರಿಗಳು ನಿರಾಕರಿಸಿದ್ದಾರೆ. ಈ ಎಲ್ಲಾ ಅಂಶಗಳು ಇದೀಗ ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕಲಬುರಗಿ: ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ಶಿಸ್ತಿನಲ್ಲಿರಿಸಲು 5 ವರ್ಷದ ಬಾಲಕನನ್ನು ಮರಕ್ಕೆ ನೇತು ಹಾಕಿದ ಶಿಕ್ಷಕಿ!

ವಿಶ್ವಕಪ್ ವಿಜೇತ ಕರ್ನಾಟಕದ ಅಂಧ ಕ್ರಿಕೆಟ್ ಆಟಗಾರ್ತಿಯರಿಗೆ ತಲಾ 10 ಲಕ್ಷ ರೂ ನಗದು, ಸರ್ಕಾರಿ ಉದ್ಯೋಗ: ಸಿಎಂ ಸಿದ್ದರಾಮಯ್ಯ ಘೋಷಣೆ

ನಾಯಕತ್ವ ಬದಲಾವಣೆ ಬಗ್ಗೆ ಸಾರ್ವಜನಿಕವಾಗಿ ಚರ್ಚಿಸಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ

SCROLL FOR NEXT