ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ 
ರಾಜ್ಯ

ಜಿಲ್ಲಾಧಿಕಾರಿ ಕಚೇರಿಗೆ ಸರ್ಕಾರಿ ವಾಹನದಲ್ಲಿ ಬಂದ ಮಹದೇವಪ್ಪ ಪುತ್ರ

ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಮತ್ತೆ ಸುದ್ದಿಗೆ ಬಂದಿದ್ದು, ಮೈಸೂರು ಜಿಲ್ಲಾಧಿಕಾರಿಗ ಕಚೇರಿಗೆ ಸರ್ಕಾರಿ ವಾಹನದಲ್ಲಿ ಹೋಗಿರುವುದು ಇದೀಗ...

ಮೈಸೂರು: ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಮತ್ತೆ ಸುದ್ದಿಗೆ ಬಂದಿದ್ದು, ಮೈಸೂರು ಜಿಲ್ಲಾಧಿಕಾರಿಗ ಕಚೇರಿಗೆ ಸರ್ಕಾರಿ ವಾಹನದಲ್ಲಿ ಹೋಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಬನ್ನೂರು - ಟಿ ನರಸೀಪುರದ ರಸ್ತೆ ಅಗಲೀಕರಣ ಕುರಿತು ಭೂಮಿಯನ್ನು ಸ್ವಾಧೀನ ವಿಚಾರ ಕುರಿತಂತೆ ಮಾತನಾಡುವ ಸಲುವಾಗಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರು ನಿನ್ನೆ ಮೈಸೂರು ಜಿಲ್ಲಾಧಿಕಾರಿ ಸಿ ಶಿಖಾ ಅವರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಸುನಿಲ್ ಬೋಸ್ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸಿಇಎಸ್ ಸಿ) ವಾಹನದಲ್ಲಿ ತೆರಳಿದ್ದರು.

ಭೂಮಿ ಕಳೆದುಕೊಂಡ ಜನರು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಸಾಕಷ್ಟು ಮಂದಿ ಭೂಮಿ ಕಳೆದುಕೊಂಡಿದ್ದರೂ ಅವರಿಗೆ ಸಿಗಬೇಕಿದ್ದ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಸಿಇಎಸ್ಇ ವಾಹನದಲ್ಲಿ ಬಂದಿದ್ದೆ ಎಂದು ಸುನಿಲ್ ಬೋಸ್ ಹೇಳಿಕೊಂಡಿದ್ದಾರೆ.

ಸುನಿಲ್ ಬೋಸ್ ಭೇಟಿ ಕುರಿತಂತೆ ಶಿಖಾ ಅವರು ಮಾತನಾಡಿದ್ದು, ಭೂಮಿ ಕಳೆದುಕೊಂಡಿರುವ ಜನರೊಂದಿಗೆ ಸಭೆ ನಡೆಸುವಂತೆ ಮನವಿ ಸಲ್ಲಿಸಲು ಸುನಿಲ್ ಅವರು ಬಂದಿದ್ದರು. ಭೇಟಿ ವೇಳೆ ಮರೀಗೌಡ ಅವರ ವಿಚಾರವನ್ನು ಅವರು ಪ್ರಸ್ತಾಪಿಸಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT