ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ 
ರಾಜ್ಯ

ಜಿಲ್ಲಾಧಿಕಾರಿ ಕಚೇರಿಗೆ ಸರ್ಕಾರಿ ವಾಹನದಲ್ಲಿ ಬಂದ ಮಹದೇವಪ್ಪ ಪುತ್ರ

ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಮತ್ತೆ ಸುದ್ದಿಗೆ ಬಂದಿದ್ದು, ಮೈಸೂರು ಜಿಲ್ಲಾಧಿಕಾರಿಗ ಕಚೇರಿಗೆ ಸರ್ಕಾರಿ ವಾಹನದಲ್ಲಿ ಹೋಗಿರುವುದು ಇದೀಗ...

ಮೈಸೂರು: ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಮತ್ತೆ ಸುದ್ದಿಗೆ ಬಂದಿದ್ದು, ಮೈಸೂರು ಜಿಲ್ಲಾಧಿಕಾರಿಗ ಕಚೇರಿಗೆ ಸರ್ಕಾರಿ ವಾಹನದಲ್ಲಿ ಹೋಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಬನ್ನೂರು - ಟಿ ನರಸೀಪುರದ ರಸ್ತೆ ಅಗಲೀಕರಣ ಕುರಿತು ಭೂಮಿಯನ್ನು ಸ್ವಾಧೀನ ವಿಚಾರ ಕುರಿತಂತೆ ಮಾತನಾಡುವ ಸಲುವಾಗಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರು ನಿನ್ನೆ ಮೈಸೂರು ಜಿಲ್ಲಾಧಿಕಾರಿ ಸಿ ಶಿಖಾ ಅವರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಸುನಿಲ್ ಬೋಸ್ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸಿಇಎಸ್ ಸಿ) ವಾಹನದಲ್ಲಿ ತೆರಳಿದ್ದರು.

ಭೂಮಿ ಕಳೆದುಕೊಂಡ ಜನರು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಸಾಕಷ್ಟು ಮಂದಿ ಭೂಮಿ ಕಳೆದುಕೊಂಡಿದ್ದರೂ ಅವರಿಗೆ ಸಿಗಬೇಕಿದ್ದ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಸಿಇಎಸ್ಇ ವಾಹನದಲ್ಲಿ ಬಂದಿದ್ದೆ ಎಂದು ಸುನಿಲ್ ಬೋಸ್ ಹೇಳಿಕೊಂಡಿದ್ದಾರೆ.

ಸುನಿಲ್ ಬೋಸ್ ಭೇಟಿ ಕುರಿತಂತೆ ಶಿಖಾ ಅವರು ಮಾತನಾಡಿದ್ದು, ಭೂಮಿ ಕಳೆದುಕೊಂಡಿರುವ ಜನರೊಂದಿಗೆ ಸಭೆ ನಡೆಸುವಂತೆ ಮನವಿ ಸಲ್ಲಿಸಲು ಸುನಿಲ್ ಅವರು ಬಂದಿದ್ದರು. ಭೇಟಿ ವೇಳೆ ಮರೀಗೌಡ ಅವರ ವಿಚಾರವನ್ನು ಅವರು ಪ್ರಸ್ತಾಪಿಸಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT