ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ 
ರಾಜ್ಯ

ಜಿಲ್ಲಾಧಿಕಾರಿ ಕಚೇರಿಗೆ ಸರ್ಕಾರಿ ವಾಹನದಲ್ಲಿ ಬಂದ ಮಹದೇವಪ್ಪ ಪುತ್ರ

ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಮತ್ತೆ ಸುದ್ದಿಗೆ ಬಂದಿದ್ದು, ಮೈಸೂರು ಜಿಲ್ಲಾಧಿಕಾರಿಗ ಕಚೇರಿಗೆ ಸರ್ಕಾರಿ ವಾಹನದಲ್ಲಿ ಹೋಗಿರುವುದು ಇದೀಗ...

ಮೈಸೂರು: ಲೋಕೊಪಯೋಗಿ ಸಚಿವ ಹೆಚ್.ಸಿ. ಮಹದೇವಪ್ಪ ಅವರ ಪುತ್ರ ಮತ್ತೆ ಸುದ್ದಿಗೆ ಬಂದಿದ್ದು, ಮೈಸೂರು ಜಿಲ್ಲಾಧಿಕಾರಿಗ ಕಚೇರಿಗೆ ಸರ್ಕಾರಿ ವಾಹನದಲ್ಲಿ ಹೋಗಿರುವುದು ಇದೀಗ ಚರ್ಚೆಗೆ ಗ್ರಾಸವಾಗಿದೆ.

ಬನ್ನೂರು - ಟಿ ನರಸೀಪುರದ ರಸ್ತೆ ಅಗಲೀಕರಣ ಕುರಿತು ಭೂಮಿಯನ್ನು ಸ್ವಾಧೀನ ವಿಚಾರ ಕುರಿತಂತೆ ಮಾತನಾಡುವ ಸಲುವಾಗಿ ಮಹದೇವಪ್ಪ ಅವರ ಪುತ್ರ ಸುನಿಲ್ ಬೋಸ್ ಅವರು ನಿನ್ನೆ ಮೈಸೂರು ಜಿಲ್ಲಾಧಿಕಾರಿ ಸಿ ಶಿಖಾ ಅವರ ಕಚೇರಿಗೆ ಭೇಟಿ ನೀಡಿದ್ದರು. ಈ ವೇಳೆ ಸುನಿಲ್ ಬೋಸ್ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ (ಸಿಇಎಸ್ ಸಿ) ವಾಹನದಲ್ಲಿ ತೆರಳಿದ್ದರು.

ಭೂಮಿ ಕಳೆದುಕೊಂಡ ಜನರು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಲು ಸಾಧ್ಯವಾಗುತ್ತಿರಲಿಲ್ಲ. ಸಾಕಷ್ಟು ಮಂದಿ ಭೂಮಿ ಕಳೆದುಕೊಂಡಿದ್ದರೂ ಅವರಿಗೆ ಸಿಗಬೇಕಿದ್ದ ಪರಿಹಾರ ಸಿಕ್ಕಿರಲಿಲ್ಲ. ಹೀಗಾಗಿ ಸಾರ್ವಜನಿಕ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಸಿಇಎಸ್ಇ ವಾಹನದಲ್ಲಿ ಬಂದಿದ್ದೆ ಎಂದು ಸುನಿಲ್ ಬೋಸ್ ಹೇಳಿಕೊಂಡಿದ್ದಾರೆ.

ಸುನಿಲ್ ಬೋಸ್ ಭೇಟಿ ಕುರಿತಂತೆ ಶಿಖಾ ಅವರು ಮಾತನಾಡಿದ್ದು, ಭೂಮಿ ಕಳೆದುಕೊಂಡಿರುವ ಜನರೊಂದಿಗೆ ಸಭೆ ನಡೆಸುವಂತೆ ಮನವಿ ಸಲ್ಲಿಸಲು ಸುನಿಲ್ ಅವರು ಬಂದಿದ್ದರು. ಭೇಟಿ ವೇಳೆ ಮರೀಗೌಡ ಅವರ ವಿಚಾರವನ್ನು ಅವರು ಪ್ರಸ್ತಾಪಿಸಲಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT