ರಾಜ್ಯ

ಮರೀಗೌಡ ಜೊತೆಗೆ ಸಂಧಾನ ಸಾಧ್ಯವಿಲ್ಲ: ಶಿಖಾ ಸ್ಪಷ್ಟನೆ

Manjula VN

ಮೈಸೂರು: ಬೆದರಿಕೆ ಹಾಕಿ ತಲೆಮರೆಸಿಕೊಂಡಿರುವ ಕೆ. ಮರೀಗೌಡ ಅವರೊಂದಿಗೆ ಸಂಧಾನ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಮೈಸೂರು ಜಿಲ್ಲಾಧಿಕಾರಿ ಸಿ. ಶಿಖಾ ಅವರು ಸ್ಪಷ್ಟನೆ ನೀಡಿದ್ದಾರೆ.

ಪ್ರಕರಣದ ತನಿಖೆ ಪ್ರಗತಿ ಕುರಿತಂತೆ ಮಾಹಿತಿ ಪಡೆಯುವ ಸಲುವಾಗಿ ಶಿಖಾ ಅವರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರನ್ನು ಭೇಟಿ ಮಾಡಲು ನಿನ್ನೆ ಹೋಗಿದ್ದರು. ಆಯುಕ್ತರು ರಂಜಾನ್ ಹಬ್ಬದ ಭದ್ರತೆ ಕುರಿತಂತೆ ಕಾರ್ಯಪ್ರವೃತ್ತರಾಗಿದ್ದು, ಈ ಹಿನ್ನೆಲೆಯಲ್ಲಿ ಭೇಟಿಯಾಗಲು ಸಾಧ್ಯವಾಗಲಿಲ್ಲ ಎಂದು ಶಿಖಾ ಅವರು ಹೇಳಿದ್ದಾರೆ.

ಆಯುಕ್ತರೊಂದಿಗೆ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಕ್ರಮ ಕೈಗೊಳ್ಳುವಂತೆ ಕೋರಿ ಮುಖ್ಯಕಾರ್ಯದರ್ಶಿ ಮತ್ತು ಪೋಲೀಸ್ ಪ್ರಧಾನ ನಿರ್ದೇಶಕ ಪತ್ರ ಬರೆಯುವ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತದೆ. ಮಧ್ಯಸ್ಥಿಕೆ ವಹಿಸುವಂತೆ ಯಾರನ್ನು ಕೇಳಿಲ್ಲ. ನನ್ನ ದೂರಿನ ಪರವಾಗಿ ನಾನು ನಿಂತಿದ್ದೇನೆ. ಈ ವಿಚಾರದಲ್ಲಿ ಯಾವುದೇ ರೀತಿಯಲ್ಲೂ ಸಂಧಾನ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

SCROLL FOR NEXT