ಡಿವೈಎಸ್ಪಿ ಗಣಪತಿ 
ರಾಜ್ಯ

ಕಿರುಕುಳ ಆರೋಪ ತಳ್ಳಿ ಹಾಕಿದ ಪ್ರಣಬ್ ಮೊಹಾಂತಿ ಆಪ್ತರು

ನೀಡುತ್ತಿದ್ದರು ಎಂಬ ಡಿವೈಎಸ್ಪಿ ಗಣಪತಿಯವರ ಆರೋಪವನ್ನು ಐಜಿಪಿ ಪ್ರಣಬ್ ಮೊಹಾಂತಿಯವರ ಆಪ್ತರು ಶುಕ್ರವಾರ ತಿರಸ್ಕರಿಸಿದ್ದಾರೆ...

ಬೆಂಗಳೂರು: ಕಿರುಕುಳ ನೀಡುತ್ತಿದ್ದರು ಎಂಬ ಡಿವೈಎಸ್ಪಿ ಗಣಪತಿಯವರ ಆರೋಪವನ್ನು ಐಜಿಪಿ ಪ್ರಣಬ್ ಮೊಹಾಂತಿಯವರ ಆಪ್ತರು ಶುಕ್ರವಾರ ತಿರಸ್ಕರಿಸಿದ್ದಾರೆ.

ಮೊಹಾಂತಿ ವಿರುದ್ಧ ಕೇಳಿಬಂದಿರುವ ಆರೋಪಗಳ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಗಣಪತಿಯವರು ನನ್ನ ಅಡಿಯಲ್ಲಿ ಅಥವಾ ನನ್ನ ಜೊತೆಗೆ ಕೆಲಸ ಮಾಡುತ್ತಿರಲಿಲ್ಲ. ಅವರ ವಿರುದ್ಧ ಸಲ್ಲಿಸಲಾಗಿದ್ದ ವರದಿಯಿಂದಾಗಿ ಅವರನ್ನು ಅಮಾನತು ಮಾಡಲಾಗಿತ್ತು.

ಮೊಹಾಂತಿಯವರು (ಅಪರಾಧ) ಹೆಚ್ಚುವರಿ ಆಯುಕ್ತರಾಗಿದ್ದ ಸಂದರ್ಭದಲ್ಲಿ ಗಣಪತಿಯವರು ರಾಜಗೊಪಾಲನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದರು. 2011 ರಲ್ಲಿ ಜಂಟಿ ಆಯುಕ್ತರಾಗಿ (ಪಶ್ಚಿಮ ವಿಭಾಗ) ಅಧಿಕಾರಕ್ಕೆ ಬಂದಾಗ ಗಣಪತಿಯವರು ಮಡಿವಾಳ (ಆಗ್ನೇಯ) ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇದನ್ನು ಗಮನಿಸಿದರೆ, ಮೊಹಾಂತಿ ಗಣಪತಿಯವರಿಗೆ ಕಿರುಕುಳ ನೀಡುತ್ತಿದ್ದರು ಎಂಬ ಪ್ರಶ್ನೆಯೇ ಬರುವುದಿಲ್ಲ. ಮೊಹಾಂತಿ ಅವರ ವಿರುದ್ಧ ಕೇಳಿಬಂದಿರುವ ಆರೋಪಗಳು ಸತ್ಯಕ್ಕೆ ದೂರವಾದದ್ದು. ಆರೋಪಗಳಿಗೆ ಒಂದಕ್ಕೊಂದು ಸಂಬಂಧವೇ ಇಲ್ಲ. ಆರೋಪ ಸಂಬಂಧ ಸಾಕ್ಷಿಗಳೇನಾದರೂ ಇದ್ದರೆ ತೋರಿಸಲಿ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT