ಜನಾರ್ದನ ಪೂಜಾರಿ 
ರಾಜ್ಯ

ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ: ಸಿದ್ದರಾಮಯ್ಯ ಜಾರ್ಜ್ ರನ್ನು ರಕ್ಷಿಸುತ್ತಿದ್ದಾರೆ- ಜನಾರ್ದನ ಪೂಜಾರಿ

ಸಿಎಂ ಸಿದ್ದರಾಮಯ್ಯ ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಸಚಿವ ಕೆ.ಜೆ ಜಾರ್ಜ್ ಅವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಜನಾರ್ದನ ಪೂಜಾರಿ ಆರೋಪಿಸಿದ್ದಾರೆ.

ಮಂಗಳೂರು: ಡಿವೈಎಸ್ ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ನ ಹಿರಿಯ ಮುಖಂಡ ಮಾಜಿ ಸಚಿವ ಜನಾರ್ದನ ಪೂಜಾರಿ ವಾಗ್ದಾಳಿ ನಡೆಸಿದ್ದು, ಸಿಎಂ ಸಿದ್ದರಾಮಯ್ಯ ಈ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಅವರನ್ನು ರಕ್ಷಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಜನಾರ್ದನ ಪೂಜಾರಿ, ಆತ್ಮಹತ್ಯೆ ಮಾಡಿಕೊಂಡ ಎಂ.ಕೆ ಗಣಪತಿ ದಕ್ಷ ಅಧಿಕಾರಿ, ಕೊಡಗಿನ ಸುಪುತ್ರರಾಗಿದ್ದು ಸಿಎಂ ಸಿದ್ದರಾಮಯ್ಯ ಪ್ರಕರಣದ ಸತ್ಯವನ್ನು ಮುಚ್ಚಿಹಾಕಲು ಯತ್ನಿಸುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಂಕೆ ಗಣಪತಿ ಆತ್ಮಹತ್ಯೆ ಮಾಡಿಕೊಳ್ಳುವುದಕ್ಕೂ ಮುನ್ನ ಸಚಿವ ಕೆಜೆ ಜಾರ್ಜ್ ಹಾಗೂ ಇಬ್ಬರು ಅಧಿಕಾರಿಗಳ ವಿರುದ್ಧ ಕಿರುಕುಳ ನೀಡಿದ್ದ ಆರೋಪ ಮಾಡಿದ್ದಾರೆ. ಆದರೆ ಆರೋಪಿಗಳ ವಿರುದ್ಧ ಈ ವರೆಗೂ ಎಫ್ ಐಆರ್ ದಾಖಲಾಗಿಲ್ಲ ಏಕೆ? ಎಫ್ಐಆರ್ ದಾಖಲಿಸದಂತೆ ಸಿಎಂ ಸಿದ್ದರಾಮಯ್ಯ ಅವರ ಮೇಲೆ ಒತ್ತಡ ಹೇರುತ್ತಿರುವವರು ಯಾರು ಎಂದು ಜನಾರ್ದನ ಪೂಜಾರಿ ಪ್ರಶ್ನಿಸಿದ್ದಾರೆ. 
ಸಾಮಾನ್ಯವಾಗಿ ಸಾಯುವವರು ಸುಳ್ಳು ಹೇಳುವುದಿಲ್ಲ. ಸಾವಿನ ಮುನ್ನ ನೀಡಿರುವ ಹೇಳಿಕೆಯನ್ನು ಮಾನ್ಯ ಮಾಡಬೇಕು ಎಂದು ಸುಪ್ರೀಂ ಕೋರ್ಟ್ ಸಹ ಹೇಳಿದೆ. ಆದರೆ ಸಿಎಂ ಸಿದ್ದರಾಮಯ್ಯ ಸರ್ಕಾರ ಕೆಜೆ ಜಾರ್ಜ್ ಅವರನ್ನು ರಕ್ಷಿಸಲು ಯತ್ನಿಸುತ್ತಿದೆ, ಸಿದ್ದರಾಮಯ್ಯ ಅವರ ನಡೆಯಿಂದ ಕಾಂಗ್ರೆಸ್ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ ಎಂದು ಜನಾರ್ದನ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

26/11 ಮುಂಬೈ ದಾಳಿಗೆ 17 ವರ್ಷ: ಕರಾಳ ದಿನ ನೆನೆದ ದೇಶದ ಜನತೆ, ಹುತಾತ್ಮರಿಗೆ ಭಾವಪೂರ್ಣ ಶ್ರದ್ಧಾಂಜಲಿ

ಸಿಎಂ ಹುದ್ದೆ ಗುದ್ದಾಟ: ಸಿದ್ದರಾಮಯ್ಯ-ಡಿ ಕೆ ಶಿವಕುಮಾರ್ ಗೆ ಹೈಕಮಾಂಡ್ ದೆಹಲಿಗೆ ಬುಲಾವ್ ಸಾಧ್ಯತೆ

ನವೆಂಬರ್ 28ರಂದು ಉಡುಪಿಗೆ ಪ್ರಧಾನಿ ಮೋದಿ: ಬನ್ನಂಜೆಯಿಂದ ಕಲ್ಸಂಕ ಜಂಕ್ಷನ್‌ವರೆಗೆ ರೋಡ್ ಶೋ

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

SCROLL FOR NEXT