ಕೋರಮಂಗಲದಲ್ಲಿ ಕಟ್ಟಡ ನಿರ್ಮಾಣ ವೇಳೆ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕರ ದೇಹವನ್ನು ಮೇಲೆತ್ತುತ್ತಿರುವ ಅಗ್ನಿಶಾಮಕ ಮತ್ತು ತುರ್ತು ಇಲಾಖೆ ಸಿಬ್ಬಂದಿ 
ರಾಜ್ಯ

ಮಣ್ಣು ಕುಸಿದುಬಿದ್ದು ಮೂವರು ಕಾರ್ಮಿಕರು ಸಾವು

ಕೋರಮಂಗಲದ 7ನೇ ಬ್ಲಾಕ್ ನಲ್ಲಿ ಕಟ್ಟಡ ನಿರ್ಮಾಣ ಸೈಟಿನಲ್ಲಿ ಗುಂಡಿಯೊಂದನ್ನು ಅಗೆಯುವಾಗ ಮಣ್ಣು ಕುಸಿದು ಮೂವರು ...

ಬೆಂಗಳೂರು: ಕೋರಮಂಗಲದ 7ನೇ ಬ್ಲಾಕ್ ನಲ್ಲಿ ಕಟ್ಟಡ ನಿರ್ಮಾಣ ಸೈಟಿನಲ್ಲಿ ಗುಂಡಿಯೊಂದನ್ನು ಅಗೆಯುವಾಗ ಮಣ್ಣು ಕುಸಿದು ಮೂವರು ಕಾರ್ಮಿಕರು ಸಾವನ್ನಪ್ಪಿದ್ದು, ಇನ್ನೊಬ್ಬನಿಗೆ ಗಾಯವಾಗಿದ ಘಟನೆ ನಿನ್ನೆ ಸಂಜೆ ನಡೆದಿದೆ. ಸ್ಥಳಕ್ಕೆ ಧಾವಿಸಿದ ಅಗ್ನಿ ಮತ್ತು ತುರ್ತು ಸೇವೆ ಇಲಾಖೆಯವರು ಹತ್ತಿರದ ಮನೆಗಳ ನಿವಾಸಿಗಳನ್ನು ಸುರಕ್ಷತೆ ಕ್ರಮವಾಗಿ ಬೇರೆಡೆಗೆ ಸ್ಥಳಾಂತರಿಸಿದ್ದಾರೆ.
ಸಾವಿಗೀಡಾದವರಲ್ಲಿ ರುಕ್ಚಾನ ಮತ್ತು ಇಶ್ರಫಿರ್ ಎಂಬಿಬ್ಬರು ಪಶ್ಚಿಮ ಬಂಗಾಳ ಮೂಲದವರಾಗಿದ್ದು, ಶಿವಲಿಂಗ ಕೋರಮಂಗಲದವನಾಗಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಕಾರ್ಮಿಕರು ಹಗಲಿರುಳು ದುಡಿಯುತ್ತಿದ್ದರು. ಕಟ್ಟಡದ ಅಡಿಪಾಯಕ್ಕೆ ಗುಂಡಿ ಅಗೆಯುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಈ ಸಂದರ್ಭದಲ್ಲಿ ಸೈಟ್ ಮಾಲಿಕ ಝುಬೇರ್ ಆಗಲಿ, ಎಂಜಿನಿಯರ್ ಆಗಲಿ ಇರಲಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಮಣ್ಣು ತಮ್ಮ ಮೇಲೆ ಬಿದ್ದಾಗ ಕಾರ್ಮಿಕರು ಕಿರುಚಲು ಆರಂಭಿಸಿದರು. ತಕ್ಷಣವೇ ಸ್ಥಳೀಯರು ಅಗ್ನಿ ಶಾಮಕ ಮತ್ತು ತುರ್ತು ಇಲಾಖೆಗೆ ಸುದ್ದಿ ಮುಟ್ಟಿಸಿದರು. ಕಾರ್ಮಿಕರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಅಲ್ಲಿ ಸಾವನ್ನಪ್ಪಿದ್ದರು. ಗಾಯಗೊಂಡವನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ದುರ್ಘಟನೆ ನಡೆದ ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಬಿಬಿಎಂಪಿ ಅಧಿಕಾರಿಗಳು ಸೈಟ್ ಮಾಲೀಕರ ವಿರುದ್ಧ ಕೇಸು ದಾಖಲಿಸಿದರು. ಮಾಲೀಕ ಅಡಿಪಾಯ ಕಾಮಗಾರಿ ಆರಂಭಿಸುವ ಮುನ್ನ ಯಾವುದೇ ಸುರಕ್ಷತಾ ಕ್ರಮ ಕೈಗೊಂಡಿರಲಿಲ್ಲ ಮತ್ತು ಪಾಲಿಕೆಯಿಂದ ಅನುಮತಿ ಪಡೆದಿರಲಿಲ್ಲ ಎಂದು ಬಿಬಿಎಂಪಿ ಅಧಿಕಾರಿಗಳು ತಿಳಿಸಿದ್ದಾರೆ.
ರಸ್ತೆಯಲ್ಲಿ ಸುರಕ್ಷತಾ ವಾಹನ, ಆಂಬ್ಯುಲೆನ್ಸ್ ಮತ್ತು ಪೊಲೀಸ್ ವಾಹನಗಳು ಸೇರಿದ್ದರಿಂದ ಫೋರಂ ಮಾಲ್ ಹತ್ತಿರ ಗಣಪತಿ ದೇವಸ್ಥಾನ ರಸ್ತೆಯಲ್ಲಿ ಟ್ರಾಫಿಕ್ ಉಂಟಾಗಿತ್ತು.
 ಇಲ್ಲಿ ಕಾಮಗಾರಿ ವಾರದ ಹಿಂದೆಯಷ್ಟೇ ಆರಂಭವಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT