ರಾಜ್ಯ

ಡಿಸಿಗೆ ಬೆದರಿಕೆ: ಸಿಎಂ ಆಪ್ತ ಮರಿಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Lingaraj Badiger
ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ನಿಂದಿಸಿ, ಬೆದರಿಕೆ ಹಾಕಿ ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಮರೀಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಮರಿಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ಮೈಸೂರಿನ 7ನೇ ಜಿಲ್ಲಾ ಸತ್ರ ಕೋರ್ಟ್ ವಜಾಗೊಳಿಸಿದೆ.
ಶಿಖಾ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಮರೀಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ಇದೀಗ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸುವ ಮೂಲಕ ಮರಿಗೌಡ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. 
ಸಿದ್ದರಾಮಯ್ಯ ಅವರು ಎದುರಿಗಿರುವಾಗಲೇ ಮರೀಗೌಡ ಅವರು ಶಿಖಾ ಅವರಿದೆ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಸಂಬಂಧ ಜಿಲ್ಲಾಧಿಕಾರಿ ಶಿಖಾ ಅವರು ಮರಿಗೌಡ ವಿರುದ್ಧ ದೂರು ದಾಖಲಿಸಿದ್ದು, ಠಾಣೆಯಲ್ಲಿ ದೂರು ದಾಖಲಾದ ದಿನದಿಂದ ಮರಿಗೌಡ ನಾಪತ್ತೆಯಾಗಿದ್ದಾರೆ.
SCROLL FOR NEXT