ಮರೀಗೌಡ ಹಾಗೂ ಜಿಲ್ಲಾಧಿಕಾರಿ ಸಿ. ಶಿಖಾ 
ರಾಜ್ಯ

ಡಿಸಿಗೆ ಬೆದರಿಕೆ: ಸಿಎಂ ಆಪ್ತ ಮರಿಗೌಡ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ನಿಂದಿಸಿ, ಬೆದರಿಕೆ ಹಾಕಿ ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ...

ಮೈಸೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರನ್ನು ನಿಂದಿಸಿ, ಬೆದರಿಕೆ ಹಾಕಿ ತಲೆಮರೆಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕೆ.ಮರೀಗೌಡ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಕೋರ್ಟ್ ಮಂಗಳವಾರ ವಜಾಗೊಳಿಸಿದೆ.
ಮರಿಗೌಡ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಇಂದು ಮೈಸೂರಿನ 7ನೇ ಜಿಲ್ಲಾ ಸತ್ರ ಕೋರ್ಟ್ ವಜಾಗೊಳಿಸಿದೆ.
ಶಿಖಾ ಅವರಿಗೆ ಬೆದರಿಕೆ ಹಾಕಿರುವ ಪ್ರಕರಣದಲ್ಲಿ ಬಂಧನದ ಭೀತಿಯಲ್ಲಿದ್ದ ಮರೀಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಮೊರೆ ಹೋಗಿದ್ದು, ಇದೀಗ ಕೋರ್ಟ್ ಜಾಮೀನು ಅರ್ಜಿಯನ್ನು ವಜಾಗೊಳಿಸುವ ಮೂಲಕ ಮರಿಗೌಡ ಮತ್ತಷ್ಟು ಸಂಕಷ್ಟಕ್ಕೆ ಸಿಲುಕಿದಂತಾಗಿದೆ. 
ಸಿದ್ದರಾಮಯ್ಯ ಅವರು ಎದುರಿಗಿರುವಾಗಲೇ ಮರೀಗೌಡ ಅವರು ಶಿಖಾ ಅವರಿದೆ ಬೆದರಿಕೆ ಹಾಗೂ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದರು. ಈ ಸಂಬಂಧ ಜಿಲ್ಲಾಧಿಕಾರಿ ಶಿಖಾ ಅವರು ಮರಿಗೌಡ ವಿರುದ್ಧ ದೂರು ದಾಖಲಿಸಿದ್ದು, ಠಾಣೆಯಲ್ಲಿ ದೂರು ದಾಖಲಾದ ದಿನದಿಂದ ಮರಿಗೌಡ ನಾಪತ್ತೆಯಾಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT