ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ತವ್ಯ ನಿರತ ಮೂವರು ಅರಣ್ಯಾಧಿಕಾರಿಗಳ ಮೇಲೆ ಗ್ರಾಮಸ್ಥರ ಹಲ್ಲೆ

ಕಾಳಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯಾಧಿಕಾರಿಗಳ ಮೇಲೆ ಹಳಿಯಾಳ ತಾಲೂಕಿನ ಹಂದಲಿ ಗ್ರಾಮಸ್ಥರು ಹಲ್ಲೆ ನಡೆಸಿರುವ..

ಹುಬ್ಬಳ್ಳಿ/ ಮೈಸೂರು: ಕಾಳಿ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಮೂವರು ಅರಣ್ಯಾಧಿಕಾರಿಗಳ ಮೇಲೆ ಹಳಿಯಾಳ ತಾಲೂಕಿನ ಹಂದಲಿ ಗ್ರಾಮಸ್ಥರು ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಗಾಯಗೊಂಡ ಮೂವರು ಅರಣ್ಯಾಧಿಕಾರಿಗಳು ದಾಂಡೇಲಿಯ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗುತ್ತಿದ್ದಾರೆ.

ಈ ಭಾಗದ ಅರಣ್ಯ ಪ್ರದೇಶವನ್ನು ಗ್ರಾಮಸ್ಥರು ಅತಿಕ್ರಮಣ ಮಾಡಿಕೊಂಡಿದ್ದರು. ಒಂದು ಎಕರೆ ಒತ್ತುವರಿ ಮಾಡಿಕೊಂಡಿದ್ದ ಭೂಮಿಯನ್ನು ತೆರವುಗೊಳಿಸಲು ಹೋಗಿದ್ದ ಈ ಮೂವರು ಅಧಿಕಾರಿಗಳ ಮೇಲೆ ಹಲ್ಲೆ ಮಾಡಲಾಗಿತ್ತು. ಹಂದಲಿ ಗ್ರಾಮಸ್ಥರು ಈ ಜಾಗದಲ್ಲಿ ವ್ಯವಸಾಯ ಮಾಡುತ್ತಿದ್ದರು. ಜಾಗ ಖಾಲಿ ಮಾಡುವಂತೆ ಗ್ರಾಮಸ್ಥರಿಗೆ ತಿಳಿಸಲಾಗಿತ್ತು. ಆದರೆ ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರು ಎಚ್ಚರಿಕೆ ನೀಡಿ ವಾಪಸ್ ಕಳುಹಿಸಿದ್ದರು.

ಸೋಮವಾರ ಗ್ರಾಮಸ್ಥರು ದೊಣ್ಣೆ ಹಾಗೂ ಆಯುಧಗಳಿಂದ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಿದ್ದಾರೆ. ಅಧಿಕಾರಿಗಳನ್ನು ರಕ್ಷಿಸಲು ಮತ್ತೊಂದು ಅರಣ್ಯಾಧಿಕಾರಿಗಳ ತಂಡ ಬಂದಾಗ ಗ್ರಾಮಸ್ಥರು ಓಡಿ ಹೋಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

ಇನ್ನೂ ಮೈಸೂರಿನಲ್ಲೂ ಕೂಡ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ ಮಾಡಿರುವ ಘಟನೆ ವರದಿಯಾಗಿದೆ. ಬಂಡಿಪುರ ಪಕ್ಕದ ಗ್ರಾಮದಲ್ಲಿ ಎರಡು ಚಿರತೆಗಳನ್ನು ಗ್ರಾಮಸ್ಥರೇ ಕೊಂದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಭೇಟಿ ನೀಡಿದ್ದ ಅರಣ್ಯ ಇಲಾಖೆ ಅಧಿಕಾರಿಗಳ ಮೇಲೆ ಗ್ರಾಮಸ್ಥರು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ಅಧಿಕಾರಿಗಳು ಗ್ರಾಮಸ್ಥರ ವಿರುದ್ಧ ಹಲ್ಲೆ ನಡೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್