ವಿಧಾನಮಂಡಲ ಅಧಿವೇಶನ 
ರಾಜ್ಯ

ಪ್ರತಿಭಟನೆಯ ಬೆಂಕಿ: ಚರ್ಚೆಯಿಲ್ಲದೆಯೇ 5 ಮಸೂದೆಗಳು ಪಾಸ್

ಪ್ರತಿಭಟನೆಯನ್ನು ಬದಿಗಿಟ್ಟು ಮಸೂದೆ ಕುರಿತಂತೆ ಚರ್ಚೆ ನಡೆಸುವಂತೆ ಸ್ಪೀಕರ್ ಕೆ.ಬಿ ಕೋಳಿವಾಡ ಅವರು ಎಷ್ಟು ಬಾರಿ ಮಾಡಿದರೂ, ಪ್ರತಿಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ...

ಬೆಂಗಳೂರು: ಪ್ರತಿಭಟನೆಯನ್ನು ಬದಿಗಿಟ್ಟು ಮಸೂದೆ ಕುರಿತಂತೆ ಚರ್ಚೆ ನಡೆಸುವಂತೆ ಸ್ಪೀಕರ್ ಕೆ.ಬಿ ಕೋಳಿವಾಡ ಅವರು ಎಷ್ಟು ಬಾರಿ ಮಾಡಿದರೂ, ಪ್ರತಿಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ ಹಿನ್ನೆಲೆಯಲ್ಲಿ 5 ಮಸೂದೆಗಳು ಚರ್ಚೆಯಿಲ್ಲದೆಯೇ ಅಂಗೀಕಾರಗೊಂಡಿದೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, ಕರ್ನಾಟಕ ಸ್ಟ್ಯಾಂಪು (ತಿದ್ದುಪಡಿ) ಮಸೂದೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ತಿದ್ದುಪಡಿ) ಮಸೂದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಮಸೂದೆಗಳು ಚರ್ಚೆಯಿಲ್ಲದೆಯೇ ಅಂಗೀಕಾರಗೊಂಡಿರುವ ಮಸೂದೆಗಳಾಗಿವೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ನಿರ್ಮಾಣ ಕಾಮಗಾರಿಗಳ ಗುತ್ತಿಗೆ ನೀಡುವಾಗ ಪರಿಶಿಷ್ಟ ಜಾತಿ ಸಮುದಾಯಕ್ಕೆ ರು. 50 ಲಕ್ಷದವರೆಗಿನ ಕಾಮಗಾರಿಗಳನ್ನು ಟೆಂಡರ್ ರಹಿತವಾಗಿ ನೀಡುವ ಉದ್ದೇಶವನ್ನು ಹೊಂದಲಾಗಿದೆ. ರು.50 ಲಕ್ಷ ಮೀರದ ಕಾಮಗಾರಿಯಲ್ಲಿ ಶೇ.17.15 ಪರಿಶಿಷ್ಟ ಜಾತಿ, ಶೇ.6.5 ರಷ್ಟು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಮೀಸಲು ಇಡುವುದು ಕಡ್ಡಾಯವಾಗಲಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ
ಈ ಮಸೂದೆ ಕಾಯ್ದೆಯಾಗಿ ಜಾರಿಯಾಗಿದ್ದೇ ಆದರೆ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಇನ್ನು ಮುಂದೆ ಕರ್ನಾಟಕ ರಾಜ್ಯದಿಂದ ಹೊರಗೆ ಯಾವುದೇ ಕೇಂದ್ರಗಳನ್ನು ತೆರೆಯುವಂತಿಲ್ಲ.

ಕರ್ನಾಟಕ ಸ್ಟ್ಯಾಂಪು (ತಿದ್ದುಪಡಿ) ಮಸೂದೆ
ಗಣಿಗಾರಿಕೆ ಪರವಾನಗಿ ನೀಡುವಾಗ ರಾಯಧನ, ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿಧಿಸುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ. ಹೊಸ ಮಸೂದೆ ಕಾಯ್ದೆಯಾಗಿ ಜಾರಿಯಾದರೆ, 15 ಸಿ ಪ್ರವರ್ಗ ಗಣಿಗಳ ಹರಾಜಿನಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚಿನ ಆದಾಯ ಬರುವ ನಿರೀಕ್ಷೆ ಇದೆ. ಗಣಿ ಗುತ್ತಿಗೆ ನೀಡಿದ ಪ್ರದೇಶಗಳಲ್ಲಿ ಇರುವ ಖನಿಜದ ಮೌಲ್ಯವನ್ನು ಲೆಕ್ಕ ಹಾಕಿ ರಾಯಧನ, ಭದ್ರತಾ ಠೇವಣಿ, ನೋಂದಣಿ ಮತ್ತು ಮುದ್ರಾಂಕದ ಶುಲ್ಕವನ್ನು ನಿಗದಿ ಮಾಡಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT