ವಿಧಾನಮಂಡಲ ಅಧಿವೇಶನ 
ರಾಜ್ಯ

ಪ್ರತಿಭಟನೆಯ ಬೆಂಕಿ: ಚರ್ಚೆಯಿಲ್ಲದೆಯೇ 5 ಮಸೂದೆಗಳು ಪಾಸ್

ಪ್ರತಿಭಟನೆಯನ್ನು ಬದಿಗಿಟ್ಟು ಮಸೂದೆ ಕುರಿತಂತೆ ಚರ್ಚೆ ನಡೆಸುವಂತೆ ಸ್ಪೀಕರ್ ಕೆ.ಬಿ ಕೋಳಿವಾಡ ಅವರು ಎಷ್ಟು ಬಾರಿ ಮಾಡಿದರೂ, ಪ್ರತಿಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ...

ಬೆಂಗಳೂರು: ಪ್ರತಿಭಟನೆಯನ್ನು ಬದಿಗಿಟ್ಟು ಮಸೂದೆ ಕುರಿತಂತೆ ಚರ್ಚೆ ನಡೆಸುವಂತೆ ಸ್ಪೀಕರ್ ಕೆ.ಬಿ ಕೋಳಿವಾಡ ಅವರು ಎಷ್ಟು ಬಾರಿ ಮಾಡಿದರೂ, ಪ್ರತಿಪಕ್ಷಗಳು ಪ್ರತಿಭಟನೆಯನ್ನು ಮುಂದುವರೆಸಿದ ಹಿನ್ನೆಲೆಯಲ್ಲಿ 5 ಮಸೂದೆಗಳು ಚರ್ಚೆಯಿಲ್ಲದೆಯೇ ಅಂಗೀಕಾರಗೊಂಡಿದೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ, ಕರ್ನಾಟಕ ಸ್ಟ್ಯಾಂಪು (ತಿದ್ದುಪಡಿ) ಮಸೂದೆ, ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ (ತಿದ್ದುಪಡಿ) ಮಸೂದೆ, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ, ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ಮಸೂದೆಗಳು ಚರ್ಚೆಯಿಲ್ಲದೆಯೇ ಅಂಗೀಕಾರಗೊಂಡಿರುವ ಮಸೂದೆಗಳಾಗಿವೆ.

ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ತಿದ್ದುಪಡಿ) ಮಸೂದೆ

ರಾಜ್ಯ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ನಿರ್ಮಾಣ ಕಾಮಗಾರಿಗಳ ಗುತ್ತಿಗೆ ನೀಡುವಾಗ ಪರಿಶಿಷ್ಟ ಜಾತಿ ಸಮುದಾಯಕ್ಕೆ ರು. 50 ಲಕ್ಷದವರೆಗಿನ ಕಾಮಗಾರಿಗಳನ್ನು ಟೆಂಡರ್ ರಹಿತವಾಗಿ ನೀಡುವ ಉದ್ದೇಶವನ್ನು ಹೊಂದಲಾಗಿದೆ. ರು.50 ಲಕ್ಷ ಮೀರದ ಕಾಮಗಾರಿಯಲ್ಲಿ ಶೇ.17.15 ಪರಿಶಿಷ್ಟ ಜಾತಿ, ಶೇ.6.5 ರಷ್ಟು ಪರಿಶಿಷ್ಟ ಪಂಗಡದ ಗುತ್ತಿಗೆದಾರರಿಗೆ ಮೀಸಲು ಇಡುವುದು ಕಡ್ಡಾಯವಾಗಲಿದೆ.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (ತಿದ್ದುಪಡಿ) ಮಸೂದೆ
ಈ ಮಸೂದೆ ಕಾಯ್ದೆಯಾಗಿ ಜಾರಿಯಾಗಿದ್ದೇ ಆದರೆ, ಕರ್ನಾಟಕ ಮುಕ್ತ ವಿಶ್ವವಿದ್ಯಾಲಯ ಇನ್ನು ಮುಂದೆ ಕರ್ನಾಟಕ ರಾಜ್ಯದಿಂದ ಹೊರಗೆ ಯಾವುದೇ ಕೇಂದ್ರಗಳನ್ನು ತೆರೆಯುವಂತಿಲ್ಲ.

ಕರ್ನಾಟಕ ಸ್ಟ್ಯಾಂಪು (ತಿದ್ದುಪಡಿ) ಮಸೂದೆ
ಗಣಿಗಾರಿಕೆ ಪರವಾನಗಿ ನೀಡುವಾಗ ರಾಯಧನ, ಮುದ್ರಾಂಕ ಮತ್ತು ನೋಂದಣಿ ಶುಲ್ಕ ವಿಧಿಸುವುದು ಈ ಮಸೂದೆಯ ಪ್ರಮುಖ ಉದ್ದೇಶವಾಗಿದೆ. ಹೊಸ ಮಸೂದೆ ಕಾಯ್ದೆಯಾಗಿ ಜಾರಿಯಾದರೆ, 15 ಸಿ ಪ್ರವರ್ಗ ಗಣಿಗಳ ಹರಾಜಿನಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಮುಂದಿನ ದಿನಗಳಲ್ಲಿ ಹೆಚ್ಚಿನ ಆದಾಯ ಬರುವ ನಿರೀಕ್ಷೆ ಇದೆ. ಗಣಿ ಗುತ್ತಿಗೆ ನೀಡಿದ ಪ್ರದೇಶಗಳಲ್ಲಿ ಇರುವ ಖನಿಜದ ಮೌಲ್ಯವನ್ನು ಲೆಕ್ಕ ಹಾಕಿ ರಾಯಧನ, ಭದ್ರತಾ ಠೇವಣಿ, ನೋಂದಣಿ ಮತ್ತು ಮುದ್ರಾಂಕದ ಶುಲ್ಕವನ್ನು ನಿಗದಿ ಮಾಡಲಾಗುತ್ತದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT