ಮರಿಗೌಡ ಮತ್ತು ಡಿಸಿ ಶಿಖಾ 
ರಾಜ್ಯ

ಮೈಸೂರು ಡಿಸಿಗೆ ಬೆದರಿಕೆ ಪ್ರಕರಣ: ಶಿಖಾ ಜೊತೆ ರಾಜಿ ಸಂಧಾನಕ್ಕೆ ಕೆಂಪಯ್ಯ ಒತ್ತಾಯ

ಗೃಹ ಸಚಿವರ ಸಲಹೆಗಾರರಾದ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ನಿನ್ನೆ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶಿಖಾ ಅವರ ಪತಿ ಅಜಯ್ ಭೂಷಣ್ ಅವರ ಮಂಡ್ಯದಲ್ಲಿರುವ..

ಬೆಂಗಳೂರು: ಮೈಸೂರು ಜಿಲ್ಲಾಧಿಕಾರಿ ಸಿ.ಶಿಖಾ ಅವರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಆಪ್ತ ಕೆ. ಮರಿಗೌಡ ರಕ್ಷಣೆಗೆ ಗೃಹ ಇಲಾಖೆ ಯತ್ನ ನಡೆಸುತ್ತಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

ಗೃಹ ಸಚಿವರ ಸಲಹೆಗಾರರಾದ ನಿವೃತ್ತ ಐಪಿಎಸ್ ಅಧಿಕಾರಿ ಕೆಂಪಯ್ಯ ನಿನ್ನೆ ಮಂಡ್ಯ ಜಿಲ್ಲಾಧಿಕಾರಿ ಹಾಗೂ ಶಿಖಾ ಅವರ ಪತಿ ಅಜಯ್ ಭೂಷಣ್ ಅವರ ಮಂಡ್ಯದಲ್ಲಿರುವ ಅಧಿಕೃತ ನಿವಾಸಕ್ಕೆ ತೆರಳಿದ್ದರು.

ಸುಮಾರು ಮೂರು ಗಂಟೆಗಳ ಕಾಲ ಸಂಧಾನ ಯತ್ನ ನಡೆಸಿದ ಕೆಂಪಯ್ಯ ರಾಜಿ ಸಂಧಾನ ಯಶಸ್ವಿಯಾಗದೇ ವಾಪಸ್ ಬಂದಿದ್ದಾರೆ ಎನ್ನಲಾಗಿದೆ. ಕೇಸ್ ವಾಪಸ್ ತೆಗೆದು ಕೊಳ್ಳುವಂತೆ ಪತ್ನಿ ಶಿಖಾ ಅವರ ಮನವೊಲಿಸಬೇಕು ಎಂದು ಕೆಂಪಯ್ಯ ಅಜಯ್ ಭೂಷಣ್ ಅವರ ಮೇಲೆ ಒತ್ತಡ ಹಾಕಿದ್ದಾರೆಂದು ಹೇಳಲಾಗಿದೆ.

ಆದರೆ ರಾಜೀ ಸಂಧಾನ ತಿರಸ್ಕರಿಸಿರುವ ಶಿಖಾ ಅವರು, ತಮ್ಮನ್ನು ಬೇರೆಡೆ ವರ್ಗಾವಣೆ ಮಾಡಿದರೂ ಪರವಾಗಿಲ್ಲ, ಕೇಸ್ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ಸ್ಪಷ್ಟ ಪಡಿಸಿರುವುದಾಗಿ ಅಜಯ್ ನಾಗ್ ಭೂಷಣ್ ಕೆಂಪಯ್ಯ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

BBk 12: ಟಾಸ್ಕ್‌ನೇ ಮರೆತುಬಿಟ್ರಾ ಅಸುರಾಧಿಪತಿ ಕಾಕ್ರೋಚ್? ಬಾಗಿಲನ್ನು ಓಪನ್ ಮಾಡಿ ಎಂದ ಕಿಚ್ಚ ಸುದೀಪ್!

SCROLL FOR NEXT