ಡಿ.ಕೆ ಶಿವಕುಮಾರ್ 
ರಾಜ್ಯ

ಜುಲೈ 28 ಕ್ಕೆ ಮಂಡ್ಯ ಜಿಲ್ಲೆಗೆ ಕೆಆರ್ ಎಸ್ ಜಲಾಶಯದಿಂದ ನೀರು ಬಿಡುಗಡೆ

ನೀರಾವರಿ ಉದ್ದೇಶಕ್ಕಾಗಿ ಜುಲೈ 28 ರಂದು ಮಂಡ್ಯ ಜಿಲ್ಲೆಗೆ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ..

ಬೆಂಗಳೂರು: ನೀರಾವರಿ ಉದ್ದೇಶಕ್ಕಾಗಿ ಜುಲೈ 28 ರಂದು ಮಂಡ್ಯ ಜಿಲ್ಲೆಗೆ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಖಾರೀಫ್ ಬೆಳೆಗಳಾದ ರಾಗಿ ಮತ್ತು ಭತ್ತಗಳನ್ನು ಬೆಳೆಯಲು ನೀರು ಬಿಡುವಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮನವಿ ಸಲ್ಲಿಸಿದರು.  ಈ ವೇಳೆ ವಿವಿಧ ಸಂಘಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಶಿವಕುಮಾರ್ ಕೆಆರ್ ಎಸ್ ನಲ್ಲಿ ಸದ್ಯ 11.7 ಟಿಎಂಸಿ ಅಡಿ ನೀರು ಇದೆ. ಮುಂದಿನ 8ರಿಂದ 10 ದಿನಗಳಲ್ಲಿ 7 ಟಿಎಂಸಿ ಅಡಿ ನೀರು ಜಲಾಶಯ ಸೇರುವ ಸಾಧ್ಯತೆ ಇದೆ. ಹೀಗಾಗಿ ನೀರಿನ ಮಟ್ಟ ಆಧರಿಸಿ ನೀರು ಬಿಡುಗಡೆ ಮಾಡಲು ಆರಂಭಿಸುವುದಾಗಿ ಅವರು ತಿಳಿಸಿದರು.

ಮುಂದಿನ 20 ದಿನಗಳಲ್ಲಿ  ನೀರು ಬಿಡುಗಡೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ರಾಗಿ ಮತ್ತು ಭತ್ತ ಬೆಳೆಯಲು ಮಾತ್ರ ಈ ನೀರನ್ನು ಬಳಸಿಕೊಳ್ಳುವಂತೆ ಶಿವಕುಮಾರ್ ರೈತರಿಗೆ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ರೈತ ಸಂಘದ ಕೆ.ಎಸ್ ಪುಟ್ಟಣ್ಣಯ್ಯ, ಮಂಡ್ಯ ಜಿಲ್ಲೆ ಶಾಸಕರುಗಳಾದ ಚೆಲುವರಾಯ ಸ್ವಾಮಿ, ಡಿ.ಸಿ ತಮ್ಮಣ್ಣ, ರಮೇಶ್ ಬಂಡಿ ಸಿದ್ದೇಗೌಡ, ಸಂಸದ ಸಿಎಸ್ ಪುಟ್ಟರಾಜ ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT