ಡಿ.ಕೆ ಶಿವಕುಮಾರ್ 
ರಾಜ್ಯ

ಜುಲೈ 28 ಕ್ಕೆ ಮಂಡ್ಯ ಜಿಲ್ಲೆಗೆ ಕೆಆರ್ ಎಸ್ ಜಲಾಶಯದಿಂದ ನೀರು ಬಿಡುಗಡೆ

ನೀರಾವರಿ ಉದ್ದೇಶಕ್ಕಾಗಿ ಜುಲೈ 28 ರಂದು ಮಂಡ್ಯ ಜಿಲ್ಲೆಗೆ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ..

ಬೆಂಗಳೂರು: ನೀರಾವರಿ ಉದ್ದೇಶಕ್ಕಾಗಿ ಜುಲೈ 28 ರಂದು ಮಂಡ್ಯ ಜಿಲ್ಲೆಗೆ ಕೃಷ್ಣರಾಜ ಸಾಗರ ಅಣೆಕಟ್ಟಿನಿಂದ ನೀರು ಹರಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಖಾರೀಫ್ ಬೆಳೆಗಳಾದ ರಾಗಿ ಮತ್ತು ಭತ್ತಗಳನ್ನು ಬೆಳೆಯಲು ನೀರು ಬಿಡುವಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಮನವಿ ಸಲ್ಲಿಸಿದರು.  ಈ ವೇಳೆ ವಿವಿಧ ಸಂಘಗಳ ಪ್ರತಿನಿಧಿಗಳ ಜೊತೆ ಸಭೆ ನಡೆಸಿ ಬಳಿಕ ಮಾತನಾಡಿದ ಶಿವಕುಮಾರ್ ಕೆಆರ್ ಎಸ್ ನಲ್ಲಿ ಸದ್ಯ 11.7 ಟಿಎಂಸಿ ಅಡಿ ನೀರು ಇದೆ. ಮುಂದಿನ 8ರಿಂದ 10 ದಿನಗಳಲ್ಲಿ 7 ಟಿಎಂಸಿ ಅಡಿ ನೀರು ಜಲಾಶಯ ಸೇರುವ ಸಾಧ್ಯತೆ ಇದೆ. ಹೀಗಾಗಿ ನೀರಿನ ಮಟ್ಟ ಆಧರಿಸಿ ನೀರು ಬಿಡುಗಡೆ ಮಾಡಲು ಆರಂಭಿಸುವುದಾಗಿ ಅವರು ತಿಳಿಸಿದರು.

ಮುಂದಿನ 20 ದಿನಗಳಲ್ಲಿ  ನೀರು ಬಿಡುಗಡೆ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ. ರಾಗಿ ಮತ್ತು ಭತ್ತ ಬೆಳೆಯಲು ಮಾತ್ರ ಈ ನೀರನ್ನು ಬಳಸಿಕೊಳ್ಳುವಂತೆ ಶಿವಕುಮಾರ್ ರೈತರಿಗೆ ಎಚ್ಚರಿಕೆ ನೀಡಿದ್ದಾರೆ.

ಸಭೆಯಲ್ಲಿ ರೈತ ಸಂಘದ ಕೆ.ಎಸ್ ಪುಟ್ಟಣ್ಣಯ್ಯ, ಮಂಡ್ಯ ಜಿಲ್ಲೆ ಶಾಸಕರುಗಳಾದ ಚೆಲುವರಾಯ ಸ್ವಾಮಿ, ಡಿ.ಸಿ ತಮ್ಮಣ್ಣ, ರಮೇಶ್ ಬಂಡಿ ಸಿದ್ದೇಗೌಡ, ಸಂಸದ ಸಿಎಸ್ ಪುಟ್ಟರಾಜ ಸಭೆಯಲ್ಲಿ ಉಪಸ್ಥಿತರಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT