ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಸುಬ್ರೋ ಕಮಲ್ ಮುಖರ್ಜಿ 
ರಾಜ್ಯ

ನ್ಯಾಯಮೂರ್ತಿಗೂ ಲಂಚದ ಆಮಿಷ: ಲೋಕಾಯುಕ್ತ ನ್ಯಾಯಾಲಯದಲ್ಲಿ ದೂರು ದಾಖಲು

ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಸುಬ್ರೋ ಕಮಲ್ ಮುಖರ್ಜಿಯವರಿಗೆ ನೀಡಲಾಗಿದೆ ಎಂಬ ಲಂಚದ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರ್'ಟಿಐ ಕಾರ್ಯಕರ್ತರು...

ಬೆಂಗಳೂರು: ಕರ್ನಾಟಕ ಮುಖ್ಯ ನ್ಯಾಯಮೂರ್ತಿ ಸುಬ್ರೋ ಕಮಲ್ ಮುಖರ್ಜಿಯವರಿಗೆ ನೀಡಲಾಗಿದೆ ಎಂಬ ಲಂಚದ ಆಮಿಷ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರ್'ಟಿಐ ಕಾರ್ಯಕರ್ತರು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರೊಂದನ್ನು ಶನಿವಾರ ದಾಖಲಿಸಿದ್ದಾರೆ.

ಎಸ್.ಭಾಸ್ಕರನ್ ಮತ್ತು ಜಯಕುಮಾರ್ ಹಿರೇಮಠ್ ಎಂಬುವವರು ದೂರು ದಾಖಲಿಸಿದ್ದು, ಆಗಸ್ಟ್ 2 ರಂದು ಈ ಕುರಿತ ವಿಚಾರಣೆ ನಡೆಸಲಿದೆ ಎಂದು ತಿಳಿದುಬಂದಿದೆ.

ದುರಿನಲ್ಲಿ ಆರೋಪಿಗಳು ದುರುದ್ದೇಶದಿಂದ ಮುಖ್ಯ ನ್ಯಾಯಮೂರ್ತಿಗಳಿಗೆ ಲಂಚದ ಆಮಿಷವನ್ನು ಒಡ್ಡಿದ್ದು, ಈ ರೀತಿಯ ನಡವಳಿಕೆಗಳು ಶಿಕ್ಷೆಗೆ ಕಾರಣವಾದದ್ದು ಮತ್ತು ಆರೋಪಿಗಳ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿಯಲ್ಲಿ ಕ್ರಮಕೈಗೊಳ್ಳಬೇಕೆಂದು ಹೇಳಲಾಗಿದೆ.

ಭೂಮಿ ವಿವಾದ ಪ್ರಕರಣ ಸಂಬಂಧ ತಮ್ಮ ಪರವಾಗಿ ತೀರ್ಪು ನೀಡವಂತೆ ಕೋರಿ ಕೆಲವು ನನಗೆ ಲಂಚದ ಆಮಿಷವನ್ನು ಒಡ್ಡಿದ್ದರು ಎಂದು ಕರ್ನಾಟಕ ಹೈ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸುಬ್ರೋ ಕಮಲ್ ಮುಖರ್ಜಿಯವರು ಈ ಹಿಂದೆ ಹೇಳಿಕೊಂಡಿದ್ದರು. ಕಂದಾಯ ಇಲಾಖೆ ಮತ್ತು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ವಿರುದ್ಧ ಉಮ್ರಾ ಡೆವಲಪರ್ಸ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಂತರ ಕೋರ್ಟ್ ಹಾಲ್ ನಲ್ಲಿ ಸುಬ್ರೋ ಮುಖರ್ಜಿಯವರು ಈ ವಿಚಾರವನ್ನು ಬಹಿರಂಗ ಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT