ಕಲ್ಲಪ್ಪ ಹಂಡಿಭಾಗ್ 
ರಾಜ್ಯ

ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ಬಜರಂಗದಳದ ಸದಸ್ಯನ ಬಂಧನ

ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ರಾಜ್ಯ ಸಮಿತಿ ಸದಸ್ಯನೊಬ್ಬನನ್ನು ಸಿಐಡಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ...

ಬೆಂಗಳೂರು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಜರಂಗದಳ ರಾಜ್ಯ ಸಮಿತಿ ಸದಸ್ಯನೊಬ್ಬನನ್ನು ಸಿಐಡಿ ಪೊಲೀಸರು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ.

ಪ್ರದೀಪ್ ಬಂಧಿತ ಆರೋಪಿಯಾಗಿದ್ದಾನೆ. ಬಂಧಿತನು ಕಲ್ಲಪ್ಪ ಅವರ ಆತ್ಮಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾಗಿರುವ ಪ್ರವೀಣ್ ಕಾಂಡ್ಯ ಸಹಚರನಾಗಿದ್ದಾನೆಂದು ತಿಳಿದುಬಂದಿದೆ.

ಬಂಧಿತ ಆರೋಪಿ ಪ್ರದೀಪ್ ಕೂಡ ಅಪಹರಣ ಪ್ರಕರಣದಲ್ಲಿ ಭಾಗಿಯಾಗಿದ್ದು, ಶೀಘ್ರದಲ್ಲೇ ಚಿಕ್ಕಮಗಳೂರಿನ ಜಿಲ್ಲಾ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, 10 ದಿನಗಳ ಕಾಲ ತಮ್ಮ ವಶಕ್ಕೆ ನೀಡುವಂತೆ ನ್ಯಾಯಾಧೀಶರ ಬಳಿ ಮನವಿ ಮಾಡಲಾಗುತ್ತದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣದಲ್ಲಿ ಸಿಐಡಿ ಅಧಿಕಾರಿಗಳು ಮೊದಲ ಆರೋಪಿಯನ್ನು ಬಂಧಿಸಿದ್ದಾರೆ. ಪ್ರವೀಣ್ ಕಾಂಡ್ಯ ಮತ್ತು ಆತನ ಸಹಚರರ ಬಂಧನಕ್ಕಾಗಿ ಅಧಿಕಾರಿಗಳು ತಂಡವೊಂದನ್ನು ನೇಮಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT