ಮಂಗಳೂರಿನಲ್ಲಿ ನಡೆದ ಯಕ್ಷಗಾನ ಪ್ರದರ್ಶನ 
ರಾಜ್ಯ

ಮತ್ತೆ ಸುವರ್ಣಯುಗಕ್ಕೆ ಕಾಲಿಡಲಿದೆಯೇ ಸಾಂಸ್ಕೃತಿಕ ಕಲೆ ಯಕ್ಷಗಾನ?

ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ ಮತ್ತು ವಿಶಿಷ್ಟ ವೇಷ-ಭೂಣಗಳನ್ನೊಳಗೊಂಡ ಸ್ವತಂತ್ರವಾದ ಶಾಸ್ತ್ರೀಯ ಕಲೆಯೇ ಈ ಯಕ್ಷಗಾನ. ಕರ್ನಾಟಕದ ಕರಾವಳಿಯ ಗಂಡುಮೆಟ್ಟಿನ...

ಮಂಗಳೂರು: ನೃತ್ಯ, ಹಾಡುಗಾರಿಕೆ, ಮಾತುಗಾರಿಕೆ ಮತ್ತು ವಿಶಿಷ್ಟ ವೇಷ-ಭೂಣಗಳನ್ನೊಳಗೊಂಡ ಸ್ವತಂತ್ರವಾದ ಶಾಸ್ತ್ರೀಯ ಕಲೆಯೇ ಈ ಯಕ್ಷಗಾನ. ಕರ್ನಾಟಕದ ಕರಾವಳಿಯ ಗಂಡುಮೆಟ್ಟಿನ ಕಲೆ ಎಂಬ ಪ್ರಸಿದ್ಧಿಯನ್ನು ಯಕ್ಷಗಾನ ಪಡೆದುಕೊಂಡಿದೆ.

ಆಧುನಿಕ ತಂತ್ರಜ್ಞಾನ ಯುಗ ಅಸ್ತಿತ್ವಕ್ಕೆ ಬರುತ್ತಿದ್ದಂತೆ ತನ್ನ ಮೌಲ್ಯವನ್ನು ಕಳೆದುಕೊಂಡಿದ್ದ ಯಕ್ಷಗಾನ ಇದೀಗ ಮತ್ತೆ ತನ್ನದೇ ಆದ ಸುವರ್ಣಯುಗಕ್ಕೆ ಕಾಲಿಡಲಿದೆಯೇ ಎಂಬ ಪ್ರಶ್ನೆ ಎಲ್ಲರಲ್ಲೂ ಕಾಡಲು ಆರಂಭಿಸಿದೆ.

ಕೆಲ ದಿನಗಳ ಹಿಂದಷ್ಟೇ ಸಿರಿಬಾಗಿಲು ವೆಂಕಪ್ಪಯ್ಯ ಸಂಸ್ಕೃತಿ ಪ್ರತಿಷ್ಠಾನ ಮಂಗಳೂರಿನಲ್ಲಿ ಟೌನ್ ಹಾಲ್ ನಲ್ಲಿ ಜಗಜತ್ತಿ ಬಚಾ ಎಂಬ ಯಕ್ಷಗಾನವೊಂದನ್ನು ನಡೆಸಿದೆ. ಈ ಯಕ್ಷಗಾನ ನೃತ್ಯವನ್ನು ಬೆಳಗ್ಗಿನಿಂದಲೇ ಆರಂಭ ಮಾಡಲಾಗಿತ್ತು. ಹೊರಾಂಗಣದಲ್ಲಿ ಕೂತು ಯಕ್ಷಗಾನವನ್ನು ನೋಡುವ ಅವಕಾಶವನ್ನು ಪ್ರೇಕ್ಷಕರಿಗೆ ನೀಡಲಾಗಿತ್ತು. ಕಾರ್ಯಕ್ರಮದಲ್ಲಿ 1000ಕ್ಕೂ ಹೆಚ್ಚು ಮಂದಿ ಆಗಮಿಸಿದ್ದರು. ಶೇ.70 ಮಂದಿ ಯಕ್ಷಗಾನದ ಮನರಂಜನೆಯ ಸವಿಯನ್ನು ಸವಿದಿದ್ದರು.

ಕಾರ್ಯಕ್ರಮದಲ್ಲಿ ಒಬ್ಬ ಪ್ರೇಕ್ಷಕನಿಗೆ ಒಂದೊಂದು ದರ್ಜೆಯಂತೆ ಟಿಕೆಟ್ ದರವನ್ನು ರು.500, ರು.300 ಮತ್ತು ರು.200 ರಷ್ಟುನ್ನು ನಿಗದಿ ಪಡಿಸಲಾಗಿತ್ತು. ಈ ಹಿಂದೆ ಏರ್ಪಡಿಸಲಾಗುತ್ತಿದ್ದ ಸಾಕಷ್ಟು ಯಕ್ಷಗಾನ ಕಾರ್ಯಕ್ರಮಗಳನ್ನು ಉಚಿತವಾಗಿ ಆಯೋಜಿಸಲಾಗುತ್ತಿತ್ತು. ಆದರೆ, ಸಂಕಷ್ಟದಲ್ಲಿ ಸಿಲುಕಿರುವ ಕಾರ್ಯಕ್ರಮ ಆಯೋಜಕರು ಹಣವನ್ನು ತೆತ್ತು ಕಾರ್ಯಕ್ರಮ ವೀಕ್ಷಿಸುವಂತೆ ಟಿಕೆಟ್ ಗಳನ್ನು ನಿಯೋಜಿಸಿದ್ದರು. ಆದರೆ, ಇದಕ್ಕೆ ಪ್ರೇಕ್ಷಕರಿಂದ ಧನಾತ್ಮಕ ಪ್ರತಿಕ್ರಿಯೆ ಬಂದಿರುವುದು ಆಯೋಜಕರು ನಿಟ್ಟುಸಿರು ಬಿಡುವಂತಾಗಿದೆ.

ಈ ರೀತಿಯ ಟ್ರೆಂಡ್ ಮುಂದುವರೆದಿದ್ದೇ ಆದರೆ, ಕರ್ನಾಟಕ ಕರಾವಳಿ ಪ್ರದೇಶದಲ್ಲಿ ಯಕ್ಷಗಾನ ಕಾರ್ಯಕ್ರಮಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವಂತಾಗುತ್ತದೆ. ರಾಜ್ಯದ ಹೆಗ್ಗಳಿಕೆಗೆ ಕಾರಣವಾಗಿರುವ ಯಕ್ಷಗಾನ ಕೂಡ ಮತ್ತೆ ಸುವರ್ಣಯುಗಕ್ಕೆ ಕಾಲಿಡಲು ಸಹಾಯಕವಾಗುತ್ತದೆ. ಯಕ್ಷಗಾನ ಕಲೆಯತ್ತ ಯುವಕರು ಮುಖ ಮಾಡುವುದೂ ಕೂಡ ಹೆಚ್ಚಾಗುತ್ತದೆ.

ಯಕ್ಷಗಾನದಲ್ಲಿ ಪ್ರಸಿದ್ಧಿ ಪಡೆದಿರುವ ಕಲಾವಿದ ಪೆರ್ಮುದೆ ಜಯಪ್ರಕಾಶ್‌ ಶೆಟ್ಟಿ ಮಾತನಾಡಿ, ಯಕ್ಷಗಾನ ಮತ್ತೆ ಸುವರ್ಣಯುಗದತ್ತ ಕಾಲಿಡುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

ಯಕ್ಷಗಾನ ತಜ್ಞ ಪ್ರಭಾಕರ್ ಜೋಷಿಯವರು ಮಾತನಾಡಿ, ಕೇವಲ ಒಂದು ಪ್ರದರ್ಶನದಿಂದ ಯಕ್ಷಗಾನ ಸುವರ್ಣಯುಗಕ್ಕೆ ಕಾಲಿಡಲು ಸಾಧ್ಯವಿಲ್ಲ. ಕೆಲ ಪ್ರಸಿದ್ಧಿ ಪಡೆದಿರುವ ಕಲಾವಿದರು ಎಲ್ಲಿಯೇ ಹೋಗಿ ಪ್ರದರ್ಶನ ನೀಡಿದರು ಅಲ್ಲಿ ಅವರ ಅಭಿಮಾನಿಗಳು ಪ್ರದರ್ಶನವನ್ನು ನೋಡುತ್ತಾರೆ. ಯಕ್ಷಗಾನದಲ್ಲಿ ಕೆಲ ಬದಲಾವಣೆಗಳನ್ನು ತಂದರೆ ಈ ಕಲೆ ಪ್ರಸಿದ್ಧಿ ಪಡೆದುಕೊಳ್ಳುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT