ಕೆ.ಜೆ.ಜಾರ್ಜ್ 
ರಾಜ್ಯ

ಗಣಪತಿ ಆತ್ಮಹತ್ಯೆ: ಜಾರ್ಜ್, ಮೊಹಂತಿ, ಪ್ರಸಾದ್ ವಿರುದ್ಧ ಎಫ್ಐಆರ್ ದಾಖಲು

ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಐಪಿಎಸ್...

ಮಡಿಕೇರಿ: ಮಂಗಳೂರು ಐಜಿಪಿ ಕಚೇರಿಯ ಡಿವೈಎಸ್ಪಿ ಎಂ.ಕೆ.ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಕೆ.ಜೆ.ಜಾರ್ಜ್ ಹಾಗೂ ಐಪಿಎಸ್ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಮತ್ತು ಎ.ಎಂ.ಪ್ರಸಾದ್ ಅವರ ವಿರುದ್ಧ ಕೊನೆಗೂ ಮಡಿಕೇರಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ನಿನ್ನೆಯಷ್ಟೇ ಮಡಿಕೇರಿ ಜೆಎಂಎಫ್ ಸಿ ಕೋರ್ಟ್ ಗಣಪತಿ ಪ್ರಕರಣ ಸಂಬಂಧ ಎಫ್ಐಆರ್ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಮಡಿಕೇರಿ ನಗರ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ಕೆ.ಜೆ.ಜಾರ್ಜ್ ಮೊದಲ ಆರೋಪಿಯಾಗಿ ಹಾಗೂ ಪ್ರೊಣವ್ ಮೊಹಂತಿ ಎರಡನೇ ಆರೋಪಿಯಾಗಿ ಮತ್ತು ಎ.ಎಂ.ಪ್ರಸಾದ್ ಮೂರನೇ ಆರೋಪಿಯನ್ನಾಗಿ ಮಾಡಲಾಗಿದೆ.
ಈ ಮಧ್ಯೆ ಜೆಎಂಎಫ್ ಸಿ ಕೋರ್ಟ್ ನೀಡಿದ್ದ ಆದೇಶಕ್ಕೆ ಮಧ್ಯಂತರ ತಡೆ ಕೋರಿ ಪ್ರೊಣವ್ ಮೊಹಂತಿ ಹಾಗೂ ಎ.ಎಂ.ಪ್ರಸಾದ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ, ಮಧ್ಯಂತರ ತಡೆ ನೀಡಲು ಸಾಧ್ಯವಿಲ್ಲ ಎಂದು ಹೇಳಿದೆ.
ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಕೋರ್ಟ್ ಆದೇಶಿಸುತ್ತಿದ್ದಂತೆ ಕೆ.ಜೆ.ಜಾರ್ಜ್ ಅವರು ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT