ರಮೇಶ್ ಕುಮಾರ್ 
ರಾಜ್ಯ

ಜಾರ್ಜ್ ರಾಜಿನಾಮೆ ಪಡೆಯಲು ಸಿದ್ದರಾಮಯ್ಯಗೆ ಸಲಹೆ ನೀಡಿದ್ದು ಸಚಿವ ರಮೇಶ್ ಕುಮಾರ್

ಆರೋಗ್ಯ ಸಚಿವ ರಮೇಶ್ ಕುಮಾರ್ ಸಲಹೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೆಜೆ ಜಾರ್ಜ್ ರಿಂದ ರಾಜಿನಾಮೆ ಪಡೆಯಲು ಮುಖ್ಯ ಕಾರಣ...

ಬೆಂಗಳೂರು: ಆರೋಗ್ಯ ಸಚಿವ ರಮೇಶ್ ಕುಮಾರ್ ಸಲಹೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೆಜೆ ಜಾರ್ಜ್ ರಿಂದ ರಾಜಿನಾಮೆ ಪಡೆಯಲು ಮುಖ್ಯ ಕಾರಣ.

ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಕೆಜೆ ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ಜೆಎಂಎಫ್ಸಿ ಕೋರ್ಟ್ ಆದೇಶಿಸಿತ್ತು. ಈ ಆದೇಶ ಬಂದ ನಂತರ ಸುಮಾರು 30 ನಿಮಿಷಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಜತೆ ಮಾತುಕತೆ ನಡೆಸಿದ ರಮೇಶ್ ಕುಮಾರ್ ಅವರು, ಕೂಡಲೇ ಜಾರ್ಜ್ ರಾಜಿನಾಮೆಗೆ ಸೂಚಿಸುವುದು ಸರಿ ಎಂದು ಸಲಹೆ ನೀಡಿದ್ದರಂತೆ. ಕೋರ್ಟ್ ಆದೇಶ ಬಂದ ನಂತರವೂ ಸಾರ್ವಜನಿಕವಾಗಿ ಜಾರ್ಜ್ ರನ್ನು ಸಾರ್ವಜನಿಕವಾಗಿ ಸಮರ್ಥಿಸಿಕೊಳ್ಳುವುದು ಸರಿಯಲ್ಲ. ಕೋರ್ಟ್ ಆದೇಶಕ್ಕೆ ತಲೆ ಬಾಗಿದರೆ ನಿಮಗೂ ಕೂಡ ಕೀರ್ತಿ ಎಂದು ಸಿಎಂಗೆ ಮನವರಿಗೆ ಮಾಡಿಕೊಟ್ಟಿದ್ದಾರೆ.

ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಕಾಲದಲ್ಲಿ ನಡೆದ ಘಟನೆ ಬಗ್ಗೆ ವಿವರಣೆ ನೀಡಿದ್ದ ರಮೇಶ್ ಕುಮಾರ್ ಅವರು ಮಾಜಿ ಸಚಿವ ಆರ್.ಡಿ ಕಿತ್ತೂರ್ ವಿರುದ್ಧ ಆರೋಪ ಕೇಳಿ ಬಂದ ಕೂಡಲೇ ಅವರಿಂದ ರಾಜಿನಾಮೆ ಪಡೆದಿದ್ದರು. ಇದೇ ರೀತಿ ಅನೇಕ ಪ್ರಕರಣಗಳು ನಡೆದಿವೆ. ಈಗ ನೀವು ಕೂಡ ರಾಜಿನಾಮೆ ಪಡೆಯುವುದು ಒಳ್ಳೆಯದ್ದು, ಇಲ್ಲದಿದ್ದರೆ ಇದರಿಂದ ಪಕ್ಷಕ್ಕೆ ದೊಡ್ಡ ಪೆಟ್ಟು ಬಿಳುತ್ತದೆ ಎಂದು ಮನವರಿಕೆ ಮಾಡಿಕೊಟ್ಟಿದ್ದಾರೆ.

ದಿನ ಕಳೆದಂತೆ ಪ್ರಕರಣ ಜಟಿಲವಾಗುತ್ತಿದ್ದು ಸಾರ್ವಜನಿಕವಾಗಿ ಉತ್ತರ ನೀಡುವುದು ಕಷ್ಟವಾಗುತ್ತಿದೆ. ಈ ಮಧ್ಯೆ ವಿಪಕ್ಷಗಳು ಕೂಡ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆಗಳನ್ನು ಮಾಡುತ್ತಿದ್ದು ಅವರಿಗೆ ಆಹಾರವಾಗುವುದು ಬೇಡ. ವಿಪಕ್ಷಗಳು ಈಗಾಗಲೇ ಸಾಕಷ್ಟು ಡ್ಯಾಮೇಜ್ ಮಾಡಿವೆ. ತಕ್ಷಣ ಜಾರ್ಜ್ ರಾಜಿನಾಮೆಗೆ ಸೂಚಿಸಿ, ತನಿಖೆ ಮುಗಿವವರೆಗೂ ಜಾರ್ಜ್ ರಾಜಿನಾಮೆ ಪಡೆಯಿರಿ ಎಂದು ರಮೇಶ್ ಕುಮಾರ್ ಸಿಎಂ ಮನವೊಲಿಸಿದ್ದಾರೆ.

ಡಿವೈಎಸ್ಪಿ ಎಂಕೆ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧ ಮಡಿಕೇರಿ ಹೆಚ್ಚುವರಿ ಜೆಎಂಎಫ್ಸಿ ಕೋರ್ಟ್ ನ್ಯಾಯಾಧೀಶೆ ಅನ್ನಪೂರ್ಣೇಶ್ವರಿ ಅವರು ಕೆಜೆ ಜಾರ್ಜ್ ಹಾಗೂ ಹಿರಿಯ ಐಪಿಎಸ್ ಅಧಿಕಾರಿಗಳ ಅಧಿಕಾರಿಗಳಾದ ಪ್ರೊಣವ್ ಮೊಹಂತಿ ಹಾಗೂ ಎ.ಎಂ. ಪ್ರಸಾದ್ ಅವರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಮಡಿಕೇರಿ ನಗರ ಠಾಣೆ ಪೊಲೀಸರಿಗೆ ಸೂಚಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT