ಕಲ್ಲಪ್ಪ ಹಂಡಿಭಾಗ್ 
ರಾಜ್ಯ

ಡಿವೈಎಸ್ಪಿ ಕಲ್ಲಪ್ಪ ಆತ್ಮಹತ್ಯೆ ಪ್ರಕರಣ: ಪ್ರಮುಖ ಆರೋಪಿ ಅಭಿರಾಮ್ ಬಂಧನ

ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಭಿ ಅಲಿಯಾಸ್...

ಬೆಂಗಳೂರು: ಚಿಕ್ಕಮಗಳೂರು ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಅಭಿ ಅಲಿಯಾಸ್ ಅಭಿರಾಮ್ ನನ್ನು ಸಿಐಡಿ ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಸಿಐಡಿ ಅಧಿಕಾರಿಗಳ ಪ್ರಕಾರ, ಅಭಿರಾಮ್ ಒಬ್ಬ ವಿದ್ಯಾರ್ಥಿಯಾಗಿದ್ದು, ತೇಜಸ್ ಗೌಡ ಅಪಹರಣ ಪ್ರಕರಣದಲ್ಲಿ ಪ್ರಮುಖ ಪಾತ್ರವಹಿಸಿದ್ದಾನೆ ಎನ್ನಲಾಗಿದೆ. ಪ್ರಕರಣ ಸಂಬಂಧ ಈ ಮುಂಚೆ ಅಪಹರಣಕ್ಕೆ ಸಹಕರಿಸಿದ ಆರೋಪದ ಮೇಲೆ ರಾಜ್ಯ ಬಜರಂಗದಳದ ಸದಸ್ಯ ಪ್ರದೀಪ್ ನನ್ನು ಬಂಧಿಸಲಾಗಿತ್ತು.
ಪ್ರಕರಣದ ಇತರೆ ಪ್ರಮುಖ ಆರೋಪಿಗಳಾದ ಪ್ರವೀಣ್ ಖಾಂಡ್ಯ ಹಾಗೂ ನವೀನ್ ಶೆಟ್ಟಿಯ ಬಂಧನಕ್ಕಾಗಿ ತೀವ್ರ ಶೋಧ ನಡೆಸುತ್ತಿದ್ದು, ಆರೋಪಿಗಳ ಬಗ್ಗೆ ಮಾಹಿತಿ ನೀಡಿದರೆ ಬಹುಮಾನ ನೀಡುವುದಾಗಿ ಸಹ ಸಿಐಡಿ ಘೋಷಿಸಿದೆ.
ತೇಜಸ್‌ ಗೌಡನ ಅಪಹರಣ ಹಾಗೂ ಆನಂತರದ ಬೆಳವಣಿಗೆಗಳನ್ನು ಅವಲೋಕಿಸಿದಾಗ ಪ್ರವೀಣ್‌ ಖಾಂಡ್ಯ ಈ ಹಿಂದೆ ಸಹ ಮಲೆನಾಡಿನ ವ್ಯಾಪಾರಿಗಳು, ಫೈನಾನ್ಷಿಯರ್‌ಗಳು ಸೇರಿದಂತೆ ಸಿರಿವಂತರನ್ನು ಬೆದರಿಸಿ ಹಣ ಸುಲಿಗೆ ಮಾಡಿರುವ ಅನುಮಾನಗಳಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT