ಸಾಂದರ್ಭಿಕ ಚಿತ್ರ 
ರಾಜ್ಯ

ಪತ್ನಿಯನ್ನು ಕೊಂದು ರಕ್ತಸಿಕ್ತ ಮಚ್ಚಿನೊಂದಿಗೆ ಪೊಲೀಸರಿಗೆ ಶರಣಾದ ಪತಿ

29 ವರ್ಷದ ವ್ಯಕ್ತಿಯೊಬ್ಬ ರಕ್ತಸಿಕ್ತ ಮಚ್ಚಿನೊಂದಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯೊಳಗೆ ಹೋದಾಗ ಅಲ್ಲಿದ್ದ...

ಬೆಂಗಳೂರು: 29 ವರ್ಷದ ವ್ಯಕ್ತಿಯೊಬ್ಬ ರಕ್ತಸಿಕ್ತ ಮಚ್ಚಿನೊಂದಿಗೆ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯೊಳಗೆ ಹೋದಾಗ ಅಲ್ಲಿದ್ದ ಪೊಲೀಸರು ನಿಜಕ್ಕೂ ಗಾಬರಿಯಾದರು. ಆತ ತನ್ನ ಪತ್ನಿಯನ್ನು ಕೊಂದು ಪೊಲೀಸರಿಗೆ ಶರಣಾಗಲು ಬಂದಿದ್ದ.
ಆರೋಪಿ ಪುನೀತ್ ಕುಮಾರ್ ವೃತ್ತಿಯಲ್ಲಿ ಚಾಲಕನಾಗಿದ್ದು, ಕೆಲ ವರ್ಷಗಳ ಹಿಂದೆ ಪಲ್ಲವಿ ಎಂಬಾಕೆಯನ್ನು ವಿವಾಹವಾಗಿದ್ದ. ದಂಪತಿ ವಿಚ್ಛೇದನಕ್ಕೆ ಅರ್ಜಿ ಹಾಕಿದ್ದರು. ಈ ಹಿನ್ನೆಲೆಯಲ್ಲಿ ನಿನ್ನೆ ಕೌಟುಂಬಿಕ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದರು. ನಿನ್ನೆ ರಾತ್ರಿ ಊಟವಾದ ಬಳಿಕ ಕೌಟುಂಬಿಕ ವಿವಾದ ಸಂಬಂಧ ದಂಪತಿ ಜಗಳ ಮಾಡಿಕೊಂಡಿದ್ದರು. ಸಿಟ್ಟಿನಿಂದ ಪುನೀತ್ ಪಲ್ಲವಿ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ. ಇಂದು ನಸುಕಿನ ವೇಳೆ ರಕ್ತದ ಕಲೆಯಾಗಿದ್ದ ಮಚ್ಚು ಹಿಡಿದುಕೊಂಡು ಪೊಲೀಸರ ಮುಂದೆ ಶರಣಾಗಲು ಹಾಜರಾದ.
ಮಾಗಡಿ ರಸ್ತೆಯಲ್ಲಿರುವ ಸುಂಕದಕಟ್ಟೆಯಲ್ಲಿ ಇರುವ ಪುನೀತ್ ಮನೆಗೆ ಪೊಲೀಸರು ಭೇಟಿ ನೀಡಿದ್ದು, ಮೃತದೇಹವನ್ನು ಆಸ್ಪತ್ರೆಗೆ ವರ್ಗಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT