ಮಹಾದೇವಪ್ಪ ಮತ್ತು ಸುನೀಲ್ ಬೋಸ್ 
ರಾಜ್ಯ

ಕೇಸ್ ವಾಪಸ್ ತೆಗೆದುಕೊಳ್ಳುವಂತೆ ಸಚಿವ ಮಹದೇವಪ್ಪ ಪುತ್ರನಿಂದ ಬೆದರಿಕೆ: ದೂರುದಾರ

ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ನೋಟಿಸ್‌ ಪಡೆದಿರುವ ಲೋಕೋಪಯೋಗಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌...

ಮೈಸೂರು: ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದಂತೆ ನೋಟಿಸ್‌ ಪಡೆದಿರುವ ಲೋಕೋಪಯೋಗಿ ಸಚಿವ ಡಾ. ಎಚ್‌.ಸಿ. ಮಹದೇವಪ್ಪ ಪುತ್ರ ಸುನಿಲ್‌ ಬೋಸ್‌ ನ್ಯಾಯಾಲಯದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಇದರಿಂದ ನ್ಯಾಯಾಧೀಶರು ವಿಚಾರಣೆಯನ್ನು ಆ.4ಕ್ಕೆ ಮುಂದೂಡಿದ್ದಾರೆ.

ತಾವು ನೀಡಿರುವ ದೂರು ವಾಪಸ್ ಪಡೆದುಕೊಳ್ಳುವಂತೆ ಹೇಳಿ ನನಗೆ ಬೆದಗಕೆ ಕರೆಗಳು ಬರುತ್ತಿವೆ. ಜೊತೆಗೆ 10 ಲಕ್ಷ ರು. ಲಂಚದ ಆಮೀಷ ಕೂಡ ನೀಡಲಾಗುತ್ತಿದೆ ಎಂದು ದೂರುದಾರ ಬಸವರಾಜು ಆರೋಪಿಸಿದ್ದಾರೆ. ನನ್ನ ಕಕ್ಷಿದಾರರಿಗೆ ಕೇಸ್ ವಾಪಸ್ ತೆಗೆದುಕೊಳುವಂತೆ ಆಗ್ರಹಿಸಿ ಬೆದರಿಕೆ ಕರೆಗಳು ಬರುತ್ತಿವೆ ಬಸವರಾಜು ಪರ ವಕೀಲ ಲೋಕೇಶ್ ತಿಳಿಸಿದ್ದಾರೆ.

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕ ಕೆ. ರಾಮೇಶ್ವರಪ್ಪ ಲಕ್ಷ್ಮಿಪುರಂ ಮತ್ತು ಟಿ ನರಸಿಪುರ ಪೊಲೀಸ್ ಠಾಣೆಗಳಲ್ಲಿ ಸುಳ್ಳು ದೂರುಗಳನ್ನು ದಾಖಲಿಸಿದ್ದಾರೆ ಎಂದು ಬಸವರಾಜು ಆರೋಪಿಸಿದ್ದಾರೆ.

ಮರಳು ಪರವಾನಗಿ ನೀಡಲು ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುವಂತೆ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ ವಿಜ್ಞಾನಿಗೆ ಪ್ರಚೋದನೆ ನೀಡಿದ್ದಾರೆಂಬ ಆರೋಪ ಎದುರಿಸುತ್ತಿರುವ ಸುನಿಲ್‌ ಬೋಸ್‌, ಕೋರ್ಟ್‌ಗೆ ಖುದ್ದು ಹಾಜರಾಗಬೇಕೆಂದು ಪ್ರಕರಣದ ವಿಚಾರಣೆ ನಡೆಸುತ್ತಿರುವ ಮೈಸೂರಿನ 3ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನೋಟಿಸ್‌ ಜಾರಿಗೊಳಿಸಿತ್ತು. ಆದರೆ ಬೋಸ್ ಹಾಜರಾಗಿರಲಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT