ಅಪಘಾತದಲ್ಲಿ ನಜ್ಜುಗುಜ್ಜಾಗಿರುವ ಇನ್ನೋವಾ ಕಾರು 
ರಾಜ್ಯ

ಸರಗಳ್ಳನನ್ನು ಹಿಡಿದು ತರುವಾಗ ಅಪಘಾತ: ಪೊಲೀಸರಿಗೆ ಮಣ್ಣು ಮುಕ್ಕಿಸಿ ಆರೋಪಿ ಎಸ್ಕೇಪ್

ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕೇಂದ್ರ ಅಪರಾಧ ದಳದ ಇಬ್ಬರು ಇನ್‌ಸ್ಪೆಕ್ಟರ್‌ಗಳು ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ಗಂಭೀರ ..

ಬೆಂಗಳೂರು: ಲಾರಿ ಹಾಗೂ ಕಾರಿನ ನಡುವೆ ಸಂಭವಿಸಿದ ಅಪಘಾತದಲ್ಲಿ ಕೇಂದ್ರ ಅಪರಾಧ ದಳದ ಇಬ್ಬರು ಇನ್‌ಸ್ಪೆಕ್ಟರ್‌ಗಳು ಮತ್ತು ಮೂವರು ಕಾನ್‌ಸ್ಟೆಬಲ್‌ಗಳು ಗಂಭೀರ ಗಾಯಗೊಂಡು ಪುಣೆಯಿಂದ ಕರೆತರಲಾಗುತ್ತಿದ್ದ ಸರಗಳ್ಳನು ಅಪಘಾತ ಸ್ಥಳದಿಂದ ಪರಾರಿಯಾಗಿರುವ ಘಟನೆ ತುಮಕೂರಿರ ಊರ್ಕೆರಾ ಗ್ರಾಮದ ಬಳಿ ನಡೆದಿದೆ.

ಇನ್‌ಸ್ಪೆಕ್ಟರ್‌ಗಳಾದ ಕೆ.ಗಿರೀಶ್‌, ಆನಂದ್‌ ಕಬ್ಬೂರಿ, ಕಾನ್‌ಸ್ಟೆಬಲ್‌ಗಳಾದ ಸತೀಶ್‌, ಕುಮಾರ ಸ್ವಾಮಿ, ಮಹಾದೇವ ಗಂಭೀರ ಗಾಯಗೊಂಡಿದ್ದಾರೆ. ಗಾಯಾಳು ಇನ್‌ಸ್ಪೆಕ್ಟರ್‌ಗಳನ್ನು ತುಮಕೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ಗಾಯಗೊಂಡಿರುವ ಕಾನ್‌ಸ್ಟೆಬಲ್‌ಗಳನ್ನು ಬೆಂಗಳೂರಿನ ನಿಮ್ಹಾನ್ಸ್‌ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಜು.19 ರಂದು ಇಬ್ಬರು ಸಿಸಿಬಿ ಇನ್‌ಸ್ಪೆಕ್ಟರ್‌, ಐವರು ಕಾನ್‌ಸ್ಟೆಬಲ್‌ ನೇತೃತ್ವದ ತಂಡ ಸರಗಳ್ಳರನ್ನು ಬಂಧಿಸಿಲು ಪುಣೆಗೆ ತೆರಳಿತ್ತು. ಸಂಜಯನಗರ
ಠಾಣೆಗೆ ಸೇರಿದ ಪ್ರಕರಣವೊಂದರಲ್ಲಿ  ಭಾಗಿಯಾಗಿದ್ದ ಅಲಿ ಎಂಬಾತನನ್ನು ಹಿಡಿದು ಕರೆತರುವಾಗ ಇನೋವಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ.

ಕಾರಿಗೆ ಲಾರಿ ಡಿಕ್ಕಿ ಹೊಡೆಯುತ್ತಿದ್ದಂತೆ  ಇನ್‌ಸ್ಪೆಕ್ಟರ್‌ಗಳು, ಕಾನ್‌ಸ್ಟೆಬಲ್‌ಗಳು ಗಾಯಗೊಂಡರು. ಈ ವೇಳೆ ಕಾರಿನಲ್ಲಿ ಕುಳಿತಿದ್ದ ಸರಗಳ್ಳ ಬೇಡಿ ಸಮೇತ ಅಲ್ಲಿಂದ ಪರಾರಿಯಾಗಿದ್ದಾನೆ.

ನಾನು ಕಾರಿನ ಮಧ್ಯ ಭಾಗದಲ್ಲಿ ಕುಳಿತಿದ್ದೆ, ಹಾಗಾಗಿ ಸಣ್ಣಪುಟ್ಟ ಗಾಯಗಳಿಂದಾಗಿ ನಾನು ಬಚಾವ್ ಆಗಿದ್ದೇನೆ. ಆದರೆ ಉಳಿದ ಪೊಲೀಸರಿಗೆ ತೀವ್ರವಾದ ಗಾಯಗಳಾಗಿವೆ ಎಂದು ಸಿಸಿಬಿ ಇನ್ಸ್ ಪೆಕ್ಟರ್ ಗಿರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: 56 ಸಾವಿರ ಹುದ್ದೆ ನೇಮಕಕ್ಕೆ ಸಚಿವ ಸಂಪುಟ ಅಸ್ತು

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

T20 World Cup 2026: ಅಭಿಷೇಕ್, ಹಾರ್ದಿಕ್ ಅಬ್ಬರ; ಜಿಂಬಾಬ್ವೆ ವಿರುದ್ಧ ಟೀಂ ಇಂಡಿಯಾ ಭರ್ಜರಿ ಗೆಲುವು

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

SCROLL FOR NEXT