ಶಾಸಕ ಮುನಿರತ್ನ 
ರಾಜ್ಯ

ಕಬಾಲಿ ಚಿತ್ರದ ಟಿಕೆಟ್ ಗಳನ್ನು ಫ್ರೀಯಾಗಿ ಹಂಚಿದ ಶಾಸಕ ಮುನಿರತ್ನ

ಬೆಂಗಳೂರಿನ ರಾಜರಾಜೇಶ್ವನಗರದ ಶಾಸಕ, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ 10 ಲಕ್ಷ ರೂ ಮೌಲ್ಯದ 'ಕಬಾಲಿ' ಚಿತ್ರದ ..

ಬೆಂಗಳೂರು: ಬೆಂಗಳೂರಿನ ರಾಜರಾಜೇಶ್ವನಗರದ ಶಾಸಕ, ಕನ್ನಡ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಮುನಿರತ್ನ ಅವರು 'ಕಬಾಲಿ' ಚಿತ್ರದ 10 ಲಕ್ಷ ರೂ ಮೌಲ್ಯದ ಟಿಕೆಟ್‌ಗಳನ್ನು ಖರೀದಿಸಿ ತಮ್ಮ ಕ್ಷೇತ್ರದ ಜನತೆಗೆ ಫ್ರೀಯಾಗಿ ಹಂಚಿದ್ದಾರೆಂಬ ಆರೋಪ ಎದುರಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಮುನಿರತ್ನ ನಿರ್ಮಾಪಕರ ಸಂಘದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆಗೆ ನೀಡಬೇಕೆಂಬ ಒತ್ತಾಯ ಕೇಳಿಬಂದಿದೆ. ಇಂದು ಬೆಳಗ್ಗೆ ವೆಸ್ಟ್ ಆಫ್ ಕಾರ್ಡ್ ರೋಡ್‌ನಲ್ಲಿರುವ ನಿರ್ಮಾಪಕರ ಸಂಘದ ಕಚೇರಿಯಲ್ಲಿ ನಡೆದ ಸಭೆಯಲ್ಲಿ  ಮುಂನಿರತ್ನ ರಾಜೀನಾಮೆ ನೀಡಬೇಕೆಂದು ನಿರ್ಮಾಪಕರು ಆಗ್ರಹಿಸಿದ್ದಾರೆ.

ಮುನಿರತ್ನ ಅವರು ಕನ್ನಡ ಚಿತ್ರ ನಿರ್ಮಾಪಕರಾಗಿ ಪರಭಾಷಾ ಚಿತ್ರಗಳಿಗೆ ಪ್ರೋತ್ಸಾಹ ನೀಡಿರುವುದನ್ನು ಸಭೆ ಖಂಡಿಸಿದೆ. ಮುನಿರತ್ನ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜೊತೆಗೆ ಆದಷ್ಟು ಬೇಗ ನಿರ್ಮಾಪಕರ ಅಧ್ಯಕ್ಷೀಯ ಸ್ಥಾನಕ್ಕೆ ಚುನಾವಣೆ ನಡೆಯಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT