ಎಸ್.ಸುಮತಿ 
ರಾಜ್ಯ

ಸಿಗದ ಸಂಬಳ: 2ನೇ ಬಾರಿಗೆ ಆತ್ಮಹತ್ಯೆಗೆ ಯತ್ನಿಸಿದ ಹೋಂ ಗಾರ್ಡ್ ಸಿಬ್ಬಂದಿ ಸುಮತಿ

4 ತಿಂಗಳಿಂದ ವೇತನ ಸಿಗದಿದ್ದಕ್ಕೆ ಬೇಸತ್ತು ಹಿರಿಯ ಅಧಿಕಾರಿಗಳ ಮುಂದೆ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹ ರಕ್ಷಕ ದಳ ಸಿಬ್ಬಂದಿ ಎಸ್ ಸುಮತಿ ಮತ್ತೆ ...

ಬೆಂಗಳೂರು: 4 ತಿಂಗಳಿಂದ ವೇತನ ಸಿಗದಿದ್ದಕ್ಕೆ ಬೇಸತ್ತು ಹಿರಿಯ ಅಧಿಕಾರಿಗಳ ಮುಂದೆ ಗುರುವಾರ ಆತ್ಮಹತ್ಯೆಗೆ ಯತ್ನಿಸಿದ್ದ ಗೃಹ ರಕ್ಷಕ ದಳ ಸಿಬ್ಬಂದಿ ಎಸ್ ಸುಮತಿ ಮತ್ತೆ ಶುಕ್ರವಾರ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಆರ್ಥಿಕ ಸಮಸ್ಯೆಯಿಂದ ಬಳಲುತ್ತಿರುವ ಸುಮತಿ ಅವರನ್ನು ಎರಡನೇ ಬಾರಿಗೆ ಆತ್ಮಹತ್ಯೆ ಪ್ರಯತ್ನ ನಡೆಸಿದ್ದು, ಆಕೆಯ 15 ವರ್ಷದ ಪುತ್ರ ರಕ್ಷಿಸಿದ್ದಾನೆ. ಹಣಕಾಸಿನ ಒತ್ತಡ ಎದುರಿಸಲಾಗದೇ ಶುಕ್ರವಾರ ಸುಮತಿ ಎರಡು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಇದನ್ನು ಮನಗಂಡ ಪುತ್ರ ಗೋಕುಲ್  ಆಕೆಯನ್ನು ತಕ್ಷಣವೇ ಶಿವಾಜಿನಗರದ ಆಸ್ಪತ್ರೆಗೆ ದಾಖಲಿಸಿದ್ದಾನೆ.

ದೇವರು ದೊಡ್ಡವನು ಎರಡನೇ ಬಾರಿಗೆ ನನ್ನ ಮಗನ ಮೂಲಕ ನನ್ನನ್ನು ಬದುಕಿಸಿದ್ದಾನೆ. ನಾಳೆಯನ್ನು ಹೇಗೆ ಎದುರಿಸಬೇಕು ಎಂಬುದು ನನಗೆ ತಿಳಿಯುತ್ತಿಲ್ಲ ಎಂದು ತಮ್ಮ ಅಸಹಾಯಕತೆ ವ್ಯಕ್ತ ಪಡಿಸಿದ್ದಾರೆ.

ಇದು ಕೇವಲ ಸುಮತಿ ಮಾತ್ರವಲ್ಲ, ಉಳಿದ 619 ಹೋಮ್ ಗಾರ್ಡ್ ಸಿಬ್ಬಂದಿಯ ಕಥೆಯಾಗಿದೆ. ಹಲವು ತಿಂಗಳಿಂದ ಸಂಬಳ ಸಿಗದೇ ಇದ್ದುದ್ದರಿಂದ ಸುಮತಿ ಕೆಲವು ಪೊಲೀಸ್ ಅಧಿಕಾರಿಗಳಿಂದ ಹಣಕಾಸಿನ ಸಹಾಯ ಕೇಳಿದ್ದರು. ಆದರೆ ಆಗೆ ಯಾರು ಅವರ ನೆರವಿಗೆ ಬಂದಿರಲಿಲ್ಲ. ಈಗ ಅವರು ಆತ್ಮಹತ್ಯೆ ಮಾಡಿದ ಬಳಿಕ ಆರ್ಥಿಕ ಸಹಾಯ ನೀಡಲು ಮುಂದೆ ಬಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT