ದೀಪಕ್ ರೈ 
ರಾಜ್ಯ

ಕುಡಿದು ದಾಂಧಲೆ ಮಾಡಿದ ಸಚಿವ ರೈ ಪುತ್ರ, ಸ್ನೇಹಿತರಿಗೆ ಗ್ರಾಮಸ್ಥರಿಂದ ಥಳಿತ!

ಕಂಠಪೂರ್ತಿ ಕುಡಿದು ದಾಂಧತೆ ಮಾಡಿ ಅರಣ್ಯ ಸಚಿವ ರಮಾನಾಥ್‌ ರೈ ಅವರ ಪುತ್ರ ದೀಪಕ್‌ ಹಾಗೂ ಆತನ ಮೂವರು ಸ್ನೇಹಿತರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ...

ಮಡಿಕೇರಿ: ಕಂಠಪೂರ್ತಿ ಕುಡಿದು ದಾಂಧತೆ ಮಾಡಿ ಅರಣ್ಯ ಸಚಿವ ರಮಾನಾಥ್‌ ರೈ ಅವರ ಪುತ್ರ ದೀಪಕ್‌ ಹಾಗೂ ಆತನ ಮೂವರು ಸ್ನೇಹಿತರಿಗೆ ಗ್ರಾಮಸ್ಥರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಭಾನುವಾರ ನಡೆದಿದೆ.
ಮದ್ಯದ ಅಮಲಿನಲ್ಲಿದ್ದ ರಮಾನಾಥ್ ರೈ ಪುತ್ರ ದೀಪಕ್ ರೈ ಹಾಗೂ ಸ್ನೇಹಿತರು ವಿರಾಜಪೇಟೆ ತಾಲ್ಲೂಕಿನ ಶ್ರೀಮಂಗಲದ ಎಸ್ಟೇಟ್ ಬಳಿ ಕಾರು ನಿಲ್ಲಿಸಿ ಮೋಜು ಮಸ್ತಿಯಲ್ಲಿ ತೊಡಗಿದ್ದರು. ಈ ವೇಳೆ ಬುದ್ಧಿ ಹೇಳಿದ ಕಾಫಿ ತೋಟದ ಮಾಲೀಕನೊಂದಿಗೆ ಹಾಗೂ ಸಾರ್ವಜನಿಕರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ. ಅಲ್ಲದೆ ನಾನು ಮಿನಿಷ್ಟರ್ ಮಗ, ನಿಮ್ಮನ್ನೆಲ್ಲಾ ಜೈಲಿಗೆ ಕಳುಹಿಸುತ್ತೇನೆ ಎಂದು ದೀಪಕ್ ರೈ ಧಮ್ಕಿ ಹಾಕಿದಾಗ ಸ್ಥಳೀಯರು ಥಳಿಸಿ ಶ್ರೀಮಂಗಲ ಠಾಣೆಗೆ ಕರೆದೊಯ್ದಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಇನ್ನು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯಿಸಿರುವ ಸಚಿವ ರಮಾನಾಥ್ ರೈ ಅವರು, ನನ್ನ ಮಗ ಅಕ್ರಮ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ನನ್ನ ಮಗ ತಪ್ಪು ಮಾಡಿದ್ದರೆ ಕಾನೂನಿನಂತೆ ಕ್ರಮ ಕೈಗೊಳ್ಳಲಿ. ಆದರೆ ಮಕ್ಕಳು ಎಲ್ಲಿ ಹೋಗಿ ಏನು ತಪ್ಪು ಮಾಡುತ್ತಾರೆ ಎಂದು ಅವರ ಹಿಂದೆಯೇ ಹೋಗಿ ನೋಡಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT