ಹೈಕೋರ್ಟ್ 
ರಾಜ್ಯ

ಗಣಪತಿ ಆತ್ಮಹತ್ಯೆ ಪ್ರಕರಣ, ಐಪಿಎಸ್ ಅಧಿಕಾರಿಗಳಿಗೆ ತನಿಖೆ ಎದುರಿಸಲು ಏನು ಕಷ್ಟ: ಹೈಕೋರ್ಟ್

ಕೆ.ಜೆ.ಜಾರ್ಜ್‌ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುತ್ತಿರುವಾಗ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್‌ ಅವರಿಗೆ ತನಿಖೆ ಎದುರಿಸಲು ಏನು ...

ಬೆಂಗಳೂರು: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿಯ ಜೆಎಂಎಫ್‌ಸಿ ಕೋರ್ಟ್‌ ನಮ್ಮ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿರುವುದನ್ನು ರದ್ದುಪಡಿಸಬೇಕು ಎಂದು ಕೋರಿರುವ ಐಜಿಪಿ ಪ್ರಣವ್‌ ಮೊಹಾಂತಿ ಮತ್ತು ಎಡಿಜಿಪಿ ಎ.ಎಂ.ಪ್ರಸಾದ್‌ ಸಲ್ಲಿಸಿರುವ ರಿಟ್‌ ಅರ್ಜಿಯನ್ನು  ನ್ಯಾಯಮೂರ್ತಿ ಆನಂದ ಬೈರಾರೆಡ್ಡಿ ಅವರಿದ್ದ ಏಕಸದಸ್ಯ ನ್ಯಾಯಪೀಠವು ಮಂಗಳವಾರ ವಿಚಾರಣೆ ನಡೆಸಿತು.

ಈ ವೇಳೆ ಅರ್ಜಿದಾರರ ಪರ ಹಾಜರಾಗಿದ್ದ  ಹಿರಿಯ ವಕೀಲ ಸಿ.ವಿ.ನಾಗೇಶ್‌, ಅರ್ಜಿದಾರರ ವಿರುದ್ಧ ಮಡಿಕೇರಿ ಜೆಎಂಎಫ್‌ಸಿ ಮ್ಯಾಜಿಸ್ಟ್ರೇಟ್‌ ಆದೇಶ ಅಸಮಂಜಸವಾಗಿದೆ ಎಂದು ದೂರಿದರು.

ಕೆ.ಜೆ.ಜಾರ್ಜ್‌ ಸಚಿವ  ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸುತ್ತಿರುವಾಗ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಪ್ರಣವ್‌ ಮೊಹಾಂತಿ ಹಾಗೂ ಎ.ಎಂ.ಪ್ರಸಾದ್‌ ಅವರಿಗೆ  ತನಿಖೆ ಎದುರಿಸಲು ಏನು ಕಷ್ಟ  ಎಂದು ಹೈಕೋರ್ಟ್‌ ಪ್ರಶ್ನಿಸಿದೆ. ಐಜಿಪಿ ಪ್ರಣವ್‌ ಮೊಹಾಂತಿ ಹಾಗೂ ರಾಜ್ಯ ಗುಪ್ತಚರ ವಿಭಾಗದ ಎಡಿಜಿಪಿ ಎ.ಎಂ.ಪ್ರಸಾದ್ ಇಬ್ಬರೂ ಪ್ರಾಮಾಣಿಕ ಅಧಿಕಾರಿಗಳಾಗಿದ್ದರೆ ತನಿಖೆಗೆ ಯಾಕೆ ಹೆದರುತ್ತಿದ್ದಾರೆ  ಎಂದು ಪ್ರಶ್ನಿಸಿದ್ದಾರೆ.

ತನ್ನ ತಂದೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಮಗ ದೂರು ದಾಖಲಿಸಿದ್ದಾನೆ, ಎಂಬುದು ಇಡೀ ಪ್ರಪಂಚಕ್ಕೆ ತಿಳಿದಿದೆ ಎಂದು ಅವರು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT