ಭಾರತಿ ವಿಷ್ಣುವರ್ಧನ್ 
ರಾಜ್ಯ

ವಿಷ್ಣು ಸ್ಮಾರಕ ಮೈಸೂರಿಗೆ ಸ್ಥಳಾಂತರಿಸಲು ಸಹಕರಿಸಿ: ಭಾರತಿ

ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಿಸಲು ಸಹಕರಿಸುವಂತೆ ಅವರ ಪತ್ನಿ...

ಬೆಂಗಳೂರು: ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ ಸ್ಮಾರಕವನ್ನು ಬೆಂಗಳೂರಿನಿಂದ ಮೈಸೂರಿಗೆ ಸ್ಥಳಾಂತರಿಸಲು ಸಹಕರಿಸುವಂತೆ ಅವರ ಪತ್ನಿ ಭಾರತಿ ವಿಷ್ಣುವರ್ಧನ್ ಅವರು ಗುರುವಾರ ಮನವಿ ಮಾಡಿದ್ದಾರೆ.
ಈ ಸಂಬಂಧ ಇಂದು ನಗರದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಭಾರತಿ, ವಿಷ್ಣು ಸ್ಮಾರಕ ಮೈಸೂರಿನಲ್ಲೇ ನಿರ್ಮಾಣವಾಗಬೇಕು. ಹೀಗಾಗಿ ಸ್ಥಳಾಂತರಕ್ಕೆ ಸಹಕರಿಸಿ. ಕೆಲವರು ಸ್ಮಾರಕ ಸ್ಥಳಾಂತರಿಸಬಾರದು ಎಂದು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಅಂಥಹವರು ಮನಸ್ಸು ಬದಲಿಸಿಕೊಂಡು ನಮ್ಮೊಂದಿಗೆ ಸಹಕರಿಸಲಿ ಎಂದರು.
ಪ್ರಸ್ತುತ ವಿಷ್ಣು ಸ್ಮಾರಕವಿರುವ ಅಭಿಮಾನ್ ಸ್ಟುಡಿಯೋದ ಮಾಲಿಕತ್ವ ಹೊಂದಿರುವ ನಟ ಬಾಲಕೃಷ್ಣ ಅವರ ಮಕ್ಕಳಲ್ಲಿ ಒಗ್ಗಟ್ಟಿಲ್ಲ ಮತ್ತು ಅವರ ಪುತ್ರ ಹಗುರವಾಗಿ ಮಾತನಾಡಿರುವುದು ಮನಸ್ಸಿಗೆ ನೋವು ತಂದಿದೆ. ಹೀಗಾಗಿ, ಬೆಂಗಳೂರಿನಲ್ಲಿ ಸ್ಮಾರಕ ನಿರ್ಮಾಣ ಬೇಡವೇ ಬೇಡ ಎಂಬ ತೀರ್ಮಾನಕ್ಕೆ ಬರಲಾಗಿದೆ ಎಂದರು.
ಸ್ಮಾರಕ ನಿರ್ಮಾಣಕ್ಕಾಗಿ ಬೆಂಗಳೂರಿನ ಅಭಿಮಾನ್ ಸ್ಟುಡಿಯೊ ಜಾಗವನ್ನು ಸರ್ಕಾರ ತನ್ನ ವಶಕ್ಕೆ ತೆಗೆದುಕೊಂಡು ಬೇಲಿಯನ್ನೂ ನಿರ್ಮಿಸಿತ್ತು. ಆದರೆ, ಬೇಲಿಯನ್ನು ತೆರವುಗೊಳಿಸಲಾಗಿದೆ. ಇಷ್ಟೆಲ್ಲಾ ಆದ ಮೇಲೆ ಅಲ್ಲಿ ಸ್ಮಾರಕ ಬೇಡ. ವಿಷ್ಣುವರ್ಧನ್ ಅವರು ಬಹುವಾಗಿ ಪ್ರೀತಿಸುತ್ತಿದ್ದ ಮೈಸೂರಿನಲ್ಲಿಯೇ ಸ್ಮಾರಕ ನಿರ್ಮಿಸುವುದು ಸೂಕ್ತ ಎಂದರು.
ವಿಷ್ಣು ಸ್ಮಾರಕ ಸ್ಥಳಾಂತರ ಮಾಡುವುದರಲ್ಲಿ ಯಾವುದೇ ತಪ್ಪು ಇಲ್ಲ. ಚಿತಾಭಸ್ಮ ಮತ್ತು ವಿಭೂತಿ ಸ್ಥಳಾಂತರಿಸಿದರೆ ಎಲ್ಲವೂ ಮುಗಿದಂತೆಯೇ. ವಿಷ್ಣು ಸ್ಮಾರಕ ಕೇವಲ ಸಮಾಧಿ ಮತ್ತು ಪುತ್ಥಳಿಗೆ ಸೀಮಿತವಾಗಿರುವುದಿಲ್ಲ. ಅಲ್ಲೆ ಇತರೆ ಕಾರ್ಯಕ್ರಮಗಳು ನಡೆಯಬೇಕು ಎಂಬುದು ನಮ್ಮ ಉದ್ದೇಶ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT