ಮಹಾದಾಯಿ ತೀರ್ಪು ವಿರೋಧಿಸಿ ಉತ್ತರ ಕರ್ನಾಟಕ ಬಂದ್ (ಟಿಎನ್ ಐಇ ಚಿತ್ರ) 
ರಾಜ್ಯ

"ಮಹಾದಾಯಿ" ಬಂದ್: ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧ

ಮಹಾದಾಯಿ ನ್ಯಾಯಾಧಿಕರಣ ತೀರ್ಪಿನ ಉತ್ತರ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದ ಕಾರಣ ಕಳಸಾ ನಾಲೆಯ ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಬೆಳಗಾವಿ: ಮಹಾದಾಯಿ ನ್ಯಾಯಾಧಿಕರಣ ತೀರ್ಪಿನ ಉತ್ತರ ಕರ್ನಾಟಕದಲ್ಲಿ ಆಕ್ರೋಶ ಭುಗಿಲೆದ್ದ ಕಾರಣ ಕಳಸಾ ನಾಲೆಯ ಕಾಮಗಾರಿ ಪ್ರದೇಶಕ್ಕೆ ಪ್ರವೇಶ ನಿರ್ಬಂಧಿಸಲಾಗಿದೆ.

ಬೆಳಗಾವಿ ಜಿಲ್ಲೆ ಖಾನಾಪುರ ತಾಲ್ಲೂಕಿನ ಕಣಕುಂಬಿ ಗ್ರಾಮದ ದೇವಸ್ಥಾನದಿಂದ ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದ ಹಿಂಭಾಗದವರೆಗಿನ ಕಳಸಾ ನಾಲೆ ಕಾಮಗಾರಿ  ನಡೆಯುತ್ತಿರುವ ಸ್ಥಳ ಹಾಗೂ ಅದರ ದಂಡೆಯ ಸುತ್ತಮುತ್ತಲಿನ ಸುಮಾರು 1 ಕಿ.ಮೀ. ವ್ಯಾಪ್ತಿಯೊಳಗಿನ ಪ್ರದೇಶದಲ್ಲಿ ಪ್ರವೇಶ ನಿರ್ಬಂಧಿಸಿ ಜಿಲ್ಲಾಧಿಕಾರಿ ಎನ್. ಜಯರಾಮ್ ಆದೇಶ  ಹೊರಡಿಸಿದ್ದಾರೆ.

ಇದೇ ವೇಳೆ ಉತ್ತರ ಕರ್ನಾಟಕ ಬಂದ್ ಗೆ ಕರೆ ನೀಡಿರುವ ರೈತಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಕಾಮಗಾರಿ ಪ್ರದೇಶಕ್ಕೆ ಮುತ್ತಿಗೆ ಹಾಕುವ ಭೀತಿ ಎದುರಾಗಿದ್ದು, ಈ  ಪ್ರದೇಶದಲ್ಲಿ ವ್ಯಾಪಕ ಭದ್ರತೆ ಒದಗಿಸಲಾಗಿದೆ.

ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ, ಹಲವೆಡೆ ಲಾಠಿ ಪ್ರಹಾರ
ಇಂದು ನಡೆಯುತ್ತಿರುವ ಬಂದ್ ವೇಳೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ವಾಗ್ವಾದ ನಡೆದು ಗದಗ ಜಿಲ್ಲೆಯ ಬೆಟಗೇರಿ ಪ್ರದೇಶದಲ್ಲಿ ಕೆಲಕಾಲ ಪ್ರಕ್ಷುಬ್ಧ ವಾತಾವರಣೆ ನೆಲೆಸಿತ್ತು.  ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಪ್ರಹಾರ ನಡೆಸಬೇಕಾಯಿತು. ನವಲಗುಂದದ ಹುಬ್ಬಳ್ಳಿ ರಸ್ತೆ ಬಳಿ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪ್ರತಿಭಟನಾಕರರು ರಸ್ತೆ ಬಂದ್  ಮಾಡಿ ನಡುರಸ್ತೆಯಲ್ಲೇ ಟೈರ್ ಗೆ ಬೆಂಕಿ ಹಚ್ಚಲು ಯತ್ನಿಸಿದರು. ಈ ವೇಳೆ ಪೊಲೀಸರು ತಡೆಯಲೆತ್ನಿಸಿದಾಗ ವಾಗ್ವಾದ ನಡೆದು ಲಾಠಿ ಪ್ರಹಾರ ನಡೆಸಲಾಯಿತು. ಘಟನೆಯಲ್ಲಿ ಇಬ್ಬರು ರೈತರು,  ಪತ್ರಕರ್ತರು ಅಸ್ವಸ್ಥಗೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT