ಕರ್ನಾಟಕ ಬಂದ್ 
ರಾಜ್ಯ

ಮಹದಾಯಿ ವಿವಾದ: ಜುಲೈ 30ಕ್ಕೆ ಅಖಂಡ ಕರ್ನಾಟಕ ಬಂದ್

ಮಹದಾಯಿ ತೀರ್ಪು ವಿರೋಧಿಸಿ ಹಲವು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ಚಲನಚಿತ್ರೋದ್ಯಮ ಜುಲೈ 30ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ...

ಬೆಂಗಳೂರು: ಮಹದಾಯಿ ತೀರ್ಪು ವಿರೋಧಿಸಿ ಹಲವು ಕನ್ನಡ ಪರ ಸಂಘಟನೆಗಳು ಹಾಗೂ ಕನ್ನಡ ಚಲನಚಿತ್ರೋದ್ಯಮ ಜುಲೈ 30ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿವೆ.

ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಮಹದಾಯಿ ನ್ಯಾಯಾಧೀಕರಣದ ಮಧ್ಯಂತರ ತೀರ್ಪು ವಿರೋಧಿಸಿ ಜುಲೈ 30ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದಾರೆ.

ನ್ಯಾಯಾಧೀಕರಣದ ಮಧ್ಯಂತರ ತೀರ್ಪಿನಿಂದ ರಾಜ್ಯಕ್ಕೆ ಆದ ಅನ್ಯಾಯವನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ಇದರ ವಿರುದ್ಧ ಕನ್ನಡ ಒಕ್ಕೂಟ ಎಲ್ಲ ಹಂತಗಳಲ್ಲಿ ಹೋರಾಟ ನಡೆಸಲಿದೆ. ಉತ್ತರ ಕರ್ನಾಟಕ ಅಥವಾ ಮೈಸೂರು ಕರ್ನಾಟಕ ಎಂಬ ಪ್ರಶ್ನೆಯೇ ಇಲ್ಲಿ ಬರುವುದಿಲ್ಲ. ಈ ವಿಚಾರದಲ್ಲಿ ಕನ್ನಡಿಗರು ಒಂದಾಗಿದ್ದಾರೆ. ಎಲ್ಲ ಕನ್ನಡಪರ, ರೈತಪರ, ದಲಿತಪರ ಹಾಗೂ ಕಾರ್ಮಿಕ ಸಂಘಟನೆಗಳ ಬೆಂಬಲ ಕೋರಲಾಗಿದೆ ಎಂದರು.

ತೀರ್ಪು ವಿರೋಧಿ ಜುಲೈ 30ಕ್ಕೆ ಕನ್ನಡ ಚಿತ್ರೋದ್ಯಮ ಬಂದ್
ಮಹದಾಯಿ ತೀರ್ಪು ವಿರೋಧಿಸಿ ಕನ್ನಡ ಚಿತ್ರೋದ್ಯಮ ಜುಲೈ 30ರಂದು ಬಂದ್ ಆಚರಿಸುವುದಕ್ಕೆ ತೀರ್ಮಾನಿಸಿದೆ. ಅಂದು ಕನ್ನಡ ಚಿತ್ರರಂಗದ ಎಲ್ಲಾ ಚಟುವಟಿಕೆಗಳು ಸ್ಧಗಿತವಾಗಲಿವೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ ಗೋವಿಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

SCROLL FOR NEXT