ಗೃಹ ಸಚಿವ ಜಿ ಪರಮೇಶ್ವರ (ಸಂಗ್ರಹ ಚಿತ್ರ) 
ರಾಜ್ಯ

ಕರ್ನಾಟಕ ಬಂದ್: ಆಸ್ತಿ-ಪಾಸ್ತಿಗೆ, ಶಾಂತಿಗೆ ಧಕ್ಕೆಯಾದರೆ ಕಠಿಣ ಕ್ರಮ: ಪರಮೇಶ್ವರ್ ಎಚ್ಚರಿಕೆ

ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಮುಷ್ಕರದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಖಂಡಿತ ಕಠಿಣ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡಪರ ಸಂಘಟನೆಗಳು ನಡೆಸುತ್ತಿರುವ ಮುಷ್ಕರದ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ಬಂದರೆ ಖಂಡಿತ ಕಠಿಣ  ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಗೃಹ ಸಚಿವ ಪರಮೇಶ್ವರ ಅವರು, ಮಹದಾಯಿ ನ್ಯಾಯಾಧಿಕರಣ ವಿರೋಧಿಸಿ ಕನ್ನಡ ಪರ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆ  ಶಾಂತಿಯುತವಾಗಿರಬೇಕು. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆ ನೀಡುವ ಅಥವಾ ಶಾಂತಿ ಕದಡುವ ಪ್ರಚೋದನೆಗಳಿಗೆ ಆಸ್ಪದ ನೀಡುವುದಿಲ್ಲ. ಅಂತಹ ಪರಿಸ್ಥಿತಿ  ಕಂಡುಬಂದರೆ ಖಂಡಿತಾ ಕಾನೂನು ರೀತ್ಯ ಕಠಿಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.

ಕರ್ನಾಟಕ ಬಂದ್ ನಿಮಿತ್ತ ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಪರಮೇಶ್ವರ ಅವರು ಮುಷ್ಕರದ ವೇಳೆ ಕಟ್ಟೆಚ್ಚರಿಂದ ಇರುವಂತೆ ಪೊಲೀಸರಿಗೆ ಸೂಚಿಸಿದ್ದಾರೆ. ಅಂತೆಯೇ  ಮುಷ್ಕರದ ವೇಳೆ ಸ್ಥಳದಲ್ಲೇ ಇದ್ದು ಪರಿಸ್ಥಿತಿ ನಿಯಂತ್ರಿಸುವಂತೆ ಮತ್ತು ಅಗತ್ಯ ಬಿದ್ದರೆ ಹೆಚ್ಚುವರಿ ಪಡೆಗಳನ್ನು ಬಳಿಸಿಕೊಳ್ಳುವಂತೆ ಹೇಳಿದ್ದಾರೆ. ಇದೇ ವೇಳೆ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಮತ್ತು  ಸರ್ಕಾರಿ ಕಚೇರಿಗಳಿಗೆ ಹಾನಿ ಮಾಡದಂತೆ ಮನವಿ ಮಾಡಿರುವ ಪರಮೇಶ್ವರ ಅವರು, ಅಂತಹ ಪ್ರಕರಣಗಳೇನಾದರೂ ಕಂಡುಬಂದರೆ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ಸಿಎಂ ಸ್ಥಾನಕ್ಕೆ ರಾಜೀನಾಮೆ?, ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

SCROLL FOR NEXT