ನಟ ಕಿಚ್ಚಾ ಸುದೀಪ್ ಮತ್ತು ಟ್ವಿಟರ್ (ಟ್ವಿಟರ್ ಚಿತ್ರ) 
ರಾಜ್ಯ

ತಂದೆ ಅನಾರೋಗ್ಯದಿಂದಾಗಿ ರ‍್ಯಾಲಿಯಲ್ಲಿ ಪಾಲ್ಗೊಂಡಿಲ್ಲ: ಕಿಚ್ಚಾ ಸುದೀಪ್

ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡ ಚಿತ್ರರಂಗದ ತಾರೆಯರು ನಡೆಸುತ್ತಿರುವ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಗೈರಾಗಲು ತಂದೆಯ ಅನಾರೋಗ್ಯವೇ ಕಾರಣ ಎಂದು ಖ್ಯಾತ ಚಿತ್ರನಟ ಕಿಚ್ಚಾ ಸುದೀಪ್ ಅವರು ಹೇಳಿದ್ದಾರೆ.

ಬೆಂಗಳೂರು: ಮಹದಾಯಿ ನ್ಯಾಯಾಧಿಕರಣದ ತೀರ್ಪು ವಿರೋಧಿಸಿ ಕನ್ನಡ ಚಿತ್ರರಂಗದ ತಾರೆಯರು ನಡೆಸುತ್ತಿರುವ ಬೃಹತ್ ಪ್ರತಿಭಟನಾ ರ‍್ಯಾಲಿಯಲ್ಲಿ ಗೈರಾಗಲು ತಂದೆಯ  ಅನಾರೋಗ್ಯವೇ ಕಾರಣ ಎಂದು ಖ್ಯಾತ ಚಿತ್ರನಟ ಕಿಚ್ಚಾ ಸುದೀಪ್ ಅವರು ಹೇಳಿದ್ದಾರೆ.

ಈ ಬಗ್ಗೆ ಟ್ವಿಟರ್ ನಲ್ಲಿ ಸ್ಪಷ್ಟನೆ ನೀಡಿರುವ ಅವರು ನಮ್ಮ ತಂದೆ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ನಾನು ಅವರ ಯೋಗಕ್ಷೇಮ ವಿಚಾರಣೆಗೆ ನಾನು ಇರಲೇ ಬೇಕಾಗಿದೆ. ಹೀಗಾಗಿ  ಚಿತ್ರತಾರೆಯರ ರ‍್ಯಾಲಿಯಲ್ಲಿ ತಾವು ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಕಾವೇರಿಯಾಗಲಿ ಅಥವಾ ಮಹದಾಯಿಯಾಗಲಿ ಕರ್ನಾಟಕದ ರೈತರ ಬೆಂಬಲಕ್ಕೆ ತಾವು ಸದಾ ಸಿದ್ದರಿರುತ್ತೇವೆ ಎಂದು  ಟ್ವೀಟ್ ಮಾಡಿದ್ದಾರೆ.
ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮಹದಾಯಿ ನ್ಯಾಯಾಧಿಕರಣದ ತೀರ್ಪನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕನ್ನಡ  ಚಿತ್ರೋಧ್ಯಮ ಕೂಡ ಬೆಂಬಲ ನೀಡಿದ್ದು, ವಾಣಿಜ್ಯ ಮಂಡಳಿ ಅಧ್ಯಕ್ಷ ಸಾರಾ ಗೋವಿಂದು ನೇತೃತ್ವದಲ್ಲಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಂಡಿದೆ. ಪ್ರತಿಭಟನೆಯಲ್ಲಿ ಖ್ಯಾತ  ನಟರಾದ ಶಿವರಾಜ್ ಕುಮಾರ್, ರಮೇಶ್ ಅರವಿಂದ್, ನಟ ಯಶ್, ಗೋಲ್ಡನ್ ಸ್ಟಾರ್ ಗಣೇಶ್, ನಟಿ ಮೇಘನಾ ರಾಜ್, ನಟ ಪ್ರಜ್ವಲ್ ದೇವರಾಜ್, ನಟ ಪಂಕಜ್, ನಟಿ ಹೇಮಾ ಚೌದರಿ, ಚಿತ್ರ  ನಟ ಚಿರಂಜೀವಿ ಸರ್ಜಾ, ರಂಗಾಯಣ ರಘು, ಶೃತಿ, ಜಗ್ಗೇಶ್, ಚಿರಂಜೀವಿ ಸರ್ಜಾ, ಜೈಜಗದೀಶ್, ನಿರ್ದೇಶಕ ಶಶಾಂಕ್ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Parliament Monsoon Session: ರಾಹುಲ್ ವಿರುದ್ಧ ಆಕ್ರೋಶ; ಸಂಸತ್ ಆವರಣದಲ್ಲಿ NDA ಸಂಸದರ ಬೃಹತ್ ಪ್ರತಿಭಟನಾ ಮೆರವಣಿಗೆ, ಲೋಕಸಭೆ ಕಲಾಪ ಮಧ್ಯಾಹ್ನ 2ಕ್ಕೆ ಮುಂದೂಡಿಕೆ..!

ಪಶ್ಚಿಮ ಕೊಲಂಬಿಯಾದಲ್ಲಿ 7.4 ತೀವ್ರತೆಯ ಭೂಕಂಪ; ಮೃತರ ಸಂಖ್ಯೆ 111ಕ್ಕೆ ಏರಿಕೆ, ಹಲವರಿಗೆ ಗಾಯ

ಬಿಲಿಯನೇರ್ Gautam Adaniಗೆ ಬಿಗ್ ರಿಲೀಫ್: ಎಲ್ಲಾ ಕ್ರಿಮಿನಲ್ ಪ್ರಕರಣಗಳ ವಜಾಗೊಳಿಸಿದ ಅಮೆರಿಕಾ ನ್ಯಾಯಾಲಯ..!

ಬಿಡದಿ ಹೋರಾಟ ಅರ್ಧಕ್ಕೆ ಸ್ಥಗಿತ; ‘ರೈತರ ನ್ಯಾಯಕ್ಕಾಗಿ ತಾರ್ಕಿಕ ಅಂತ್ಯದವರೆಗೆ ಹೋರಾಟ’ ಎಂದ ದೇವೇಗೌಡ, ಆ.18ಕ್ಕೆ ವಿಧಾನಸೌಧ ಮುತ್ತಿಗೆ..!

ಬರ ಪರಿಹಾರಕ್ಕೆ ಕೇಂದ್ರದಿಂದ ಇನ್ನೂ ಉತ್ತರ ಬಂದಿಲ್ಲ; ಅಗತ್ಯವಿದ್ದರೆ ನ್ಯಾಯಾಲಯದ ಮೊರೆ: DCM ಡಾ. ಪರಮೇಶ್ವರ್‌