ಹುತಾತ್ಮ ಯೋಧ ಹಸನ್ ಸಾಬ್ (ಸಂಗ್ರಹ ಚಿತ್ರ) 
ರಾಜ್ಯ

ಕರ್ನಾಟಕದತ್ತ ಹುತಾತ್ಮ ಯೋಧರ ಪಾರ್ಥೀವ ಶರೀರ, ಹುಟ್ಟೂರಿನಲ್ಲಿ ಅಂತ್ಯ ಸಂಸ್ಕಾರ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ ವೇಳೆ ಹುತಾತ್ಮರಾದ ಕರ್ನಾಟಕದ ಯೋಧರ ಪಾರ್ಥೀವ ಶರೀರ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮೃತ ದೇಹಗಳನ್ನು ಕರ್ನಾಟಕದತ್ತ ರವಾನಿಸಲಾಗಿದೆ.

ಬೆಂಗಳೂರು: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರ ದಾಳಿ ವೇಳೆ ಹುತಾತ್ಮರಾದ ಕರ್ನಾಟಕದ ಯೋಧರ ಪಾರ್ಥೀವ ಶರೀರ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದು, ಮೃತ  ದೇಹಗಳನ್ನು ಕರ್ನಾಟಕದತ್ತ ರವಾನಿಸಲಾಗಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಗಡಿಯಲ್ಲಿ ಉಗ್ರರು ಅಡಗಿಸಿಟ್ಟಿದ್ದ ಗ್ರೆನೇಡ್ ಸ್ಫೋಟಗೊಂಡ ಪರಿಣಾಮ ವೀರ ಮರಣವನ್ನಪ್ಪಿದ್ದ ಗೋಕಾಕ್ ತಾಲ್ಲೂಕಿನ ಖನಗಾವಿ ನಿವಾಸಿ ಬಸಪ್ಪ ಪಾಟೀಲ್  ಹಾಗೂ ನವಲಗುಂದ ತಾಲ್ಲೂಕಿನ ಸೈದಾಪುರ ನಿವಾಸಿ ಹಸನ್ ಸಾಬ್ ಅವರ ಪಾರ್ಥೀವ ಶರೀರ ಗೋವಾ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ. ಬೆಳಗ್ಗೆ 9 ಗಂಟೆಗೆ ಆಗಮಿಸಿದ ಯೋಧರ ಪಾರ್ಥೀವ  ಶರೀರವನ್ನು ಸೇನಾ ವಿಶೇಷ ವಾಹನದಲ್ಲಿ ಅವರವರ ಹುಟ್ಟೂರಿಗೆ ರವಾನಿಸಲಾಗಿದೆ.

ವೀರ ಯೋಧ ಬಸಪ್ಪ ಪಾಟೀಲ್ ಅವರ ಪಾರ್ಥೀವ ಶರೀರವನ್ನು ಹೊತ್ತು ಸಾಗಿರುವ ಯೋಧರ ಒಂದು ತಂಡ ರಸ್ತೆ ಮಾರ್ಗವಾಗಿ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಖನಗಾವಿಯತ್ತ  ತರಲಾಗುತ್ತಿದೆ. ಬೆಳಗ್ಗೆ ಸುಮಾರು 10 ಗಂಟೆಗೆ ಬಸಪ್ಪ ಪಾಟೀಲ್ ಪಾರ್ಥೀವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಟ್ಟು ಬಳಿಕ ಅಂತಿಮ ವಿಧಿವಿಧಾನ ನಡೆಸಲಾಗುತ್ತದೆ ಎಂದು  ತಿಳಿದುಬಂದಿದೆ.

ಇನ್ನು ಮತ್ತೋರ್ವ ವೀರ ಯೋಧ ಹಸನ್ ಸಾಬ್ ಅವರ ಪಾರ್ಥೀವ ಶರೀವನ್ನು ಕೂಡ ಸೇನಾ ವಿಶೇಷವಾಹನದಲ್ಲಿ ಅವರ ಹುಟ್ಟೂರಾದ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ  ಸೈದಾಪುರ ಗ್ರಾಮಕ್ಕೆ ರವಾನಿಸಲಾಗಿದೆ. ಯೋಧನ ಪಾರ್ಥೀವ ಶರೀರ ಇಂದು ಧಾರವಾಡಕ್ಕೆ ಆಗಮಿಸಲಿದ್ದು, ಕಾರ್ಗಿಲ್ ಸ್ಥೂಪದಲ್ಲಿ ಹಸನ್ ಸಾಬ್ ಅವರ ಪಾರ್ಥೀವ ಶರೀರವನ್ನು ಸಾರ್ವಜನಿಕ  ದರ್ಶನಕ್ಕೆ ಇಟ್ಟು ಬಳಿಕ ಸೈದಾಪುರದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಸಂಜೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ಇನ್ನು ಯೋಧನ ಸಾವಿಗೆ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ ಅವರು ಸಂತಾಪ ಸೂಚಿಸಿದ್ದು, ಮೃತ ಯೋಧನ ಕುಟುಂಬಕ್ಕೆ ಸಚಿವರು ವೈಯಕ್ತಿಕವಾಗಿ 1 ಲಕ್ಷ  ರೂಪಾಯಿಗಳ ಪರಿಹಾರ ನೀಡಿದರು. ಯೋಧ ಹಸನ್ ಸಾಬ ಖುದಾವಂದ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವ ವಿನಯ ಕುಲಕರ್ಣಿ, ಶಾಸಕ ಸಿ.ಎಸ್.ಶಿವಳ್ಳಿ, ಶಾಸಕರಾದ  ಎನ್.ಹೆಚ್.ಕೋನರೆಡ್ಡಿ, ಶ್ರೀನಿವಾಸ ಮಾನೆ ಮುಂತಾದವರು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT