ಬಸಪ್ಪ ಪಾಟೀಲ-ಹಸನ್ ಸಾಬ್ 
ರಾಜ್ಯ

ಸಕಲ ಸರ್ಕಾರಿ ಗೌರವದೊಂದಿಗೆ ಕರ್ನಾಟಕದ ಹುತಾತ್ಮ ವೀರ ಯೋಧರ ಅಂತ್ಯಕ್ರಿಯೆ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಗಡಿಭಾಗದಲ್ಲಿನ ಬೆಟಾಲಿಕ್ ಸೆಕ್ಟರ್ ನಲ್ಲಿ ಸಂಭವಿಸಿದ್ದ ನೆಲಬಾಂಬ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧರಾದ...

ಬೆಳಗಾವಿ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರ ಗಡಿಭಾಗದಲ್ಲಿನ ಬೆಟಾಲಿಕ್ ಸೆಕ್ಟರ್ ನಲ್ಲಿ ಸಂಭವಿಸಿದ್ದ ನೆಲಬಾಂಬ್ ಸ್ಫೋಟದಲ್ಲಿ ಹುತಾತ್ಮರಾಗಿದ್ದ ಕರ್ನಾಟಕದ ಯೋಧರಾದ ಬಸವರಾಜ ಚನ್ನಪ್ಪ ಪಾಟೀಲ ಹಾಗೂ ಹಸನ್ ಸಾಬ್ ಇಮಾನ್ ಸಾಬ್ ಖುದಾವಂದ ಅವರ ಅಂತ್ಯಕ್ರಿಯೆ ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು.

ಬೆಳಗಾವಿ ಜಿಲ್ಲೆ ಗೋಕಾಕದ ನಬಪುರ ಗ್ರಾಮದ ಯೋಧ ಸುಬೇದಾರ 45 ವರ್ಷದ ಬಸವರಾಜ ಬಸಪ್ಪ ಪಾಟೀಲ ಅವರ ಅಂತ್ಯ ಸಂಸ್ಕಾರ ಖನಗಾವಿ ರುದ್ರಭೂಮಿಯಲ್ಲಿ ನೆರವೇರಿತು. ಇನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕು ಸೈದಾಪುರ ಗ್ರಾಮದ ಬಿಎಸ್ಎಫ್ ಯೋಧ 24 ವರ್ಷದ ಹಸನ್ ಸಾಬ್ ಇಮಾನ್ ಸಾಬ್ ಖುದಾವಂದ ಅಂತ್ಯ ಸಂಸ್ಕಾರ ಸ್ವಗ್ರಾಮದಲ್ಲಿ ನಡೆಯಿತು.

ಕಾಶ್ಮೀರ ಬೆಟಾಲಿಕ್ ನಲ್ಲಿ ಸೇವೆ ಸಲ್ಲಿಸುತ್ತಿದ್ದ ಬಸಪ್ಪ ಪಾಟೀಲ್ ಅವರು 1990ರ ಆಗಸ್ಟ್ ನಲ್ಲಿ ಭಾರತೀಯ ಸೇನೆಯಲ್ಲಿ ಸೇವೆ ಆರಂಭಿಸಿದರು. ಯುನಿಟ್-21 ಮದ್ರಾಸ್ 192 ಬ್ರಿಗೇಡ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ವೀರ ಯೋಧರ ಅಂತ್ಯಕ್ರಿಯೆ ಸಂದರ್ಭದಲ್ಲಿ ಕುಟುಂಬಸ್ಥರು, ಗ್ರಾಮಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಸಾವಿರಾರು ಜನರು ವೀರ ಯೋಧ ಪಾಟೀಲ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದು ಮತ್ತೆ ಹುಟ್ಟಿ ಬನ್ನಿ ಎಂಬ ಘೋಷಣೆಗಳನ್ನು ಕೂಗಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT