ಯೋಗೇಶ್ 
ರಾಜ್ಯ

ಬೆಂಗಳೂರು: ತ್ರಿಕೋನ ಪ್ರೇಮಕ್ಕೆ ಯುವಕ ಬಲಿ, ಓರ್ವನ ಬಂಧನ

ಪ್ರೇಮ ಪ್ರಕರಣ ಸಂಬಂಧ 26 ವರ್ಷದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಜಯನಗರದಲ್ಲಿ ನಡೆದಿದೆ...

ಬೆಂಗಳೂರು: ಪ್ರೇಮ ಪ್ರಕರಣ ಸಂಬಂಧ 26 ವರ್ಷದ ವ್ಯಕ್ತಿಯನ್ನು ಅಪಹರಿಸಿ ಕೊಲೆ ಮಾಡಿರುವ ಘಟನೆ ಜಯನಗರದಲ್ಲಿ ನಡೆದಿದೆ.

ಚನ್ನಪಟ್ಟಣ ತಾಲೂಕು ಕೋಲೂರು ಗ್ರಾಮದ ಯೋಗೇಶ್ ಕೊಲೆಯಾದ ಯುವಕ. ಕೊಲೆ ಸಂಬಂಧ ಗೋರಕ್ಷಣಾ ಸಮಿತಿ ಅಧ್ಯಕ್ಷ ಶಿವಕುಮಾರ್ ಪುತ್ರ ಪ್ರತಾಪ್ ನನ್ನು ಪೊಲೀಸರು ಬಂಧಿಸಿದ್ದಾರೆ.

ಯೋಗೇಶ್ ರಿಯಲ್ ಎಸ್ಟೇಟ್ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಬಂಧಿತ ಪ್ರತಾಪ್ ಮಾಗಡಿಯ ಅತ್ತಿನಗೆರೆ ಗ್ರಾಮದವನು. ಮೃತ ಯೋಗೇಶ್ ಜಯನಗರದ ತನ್ನ ಹಿರಿಯ ಅಕ್ಕನ ಮನೆಯಲ್ಲಿ ವಾಸವಾಗಿದ್ದನು.

ಜುಲೈ 19 ರಂದು ಕೆಲಸಕ್ಕೆ ತೆರಳಿದ ಯೋಗೇಶ್ ವಾಪಸ್ ಮನೆಗೆ ಬಂದಿರಲಿಲ್ಲ. ಎರಡು ದಿನದ ನಂತರ ಯೋಗೇಶ್ ಸಹೋದರಿ ಜಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ನಂತರ ಯೋಗೇಶ್ ಗೆ ಮೈಸೂರಿನ ಯುವತಿಯೋರ್ವಳ ಜೊತೆ ಪ್ರೇಮ ಸಂಬಂಧವಿದ್ದುದ್ದಾಗಿ ಆಕೆ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಆ ಯುವತಿಯನ್ನು ವಿಚಾರಣೆ ನಡೆಸಿದಾಗ ಪ್ರತಾಪ್ ನ ಬಗ್ಗೆ ಆಕೆ ಮಾಹಿತಿ ಬಹಿರಂಗ ಪಡಿಸಿದ್ದಾಳೆ.

ಪ್ರತಾಪ್ ಮೈಸೂರಿನ ಯುವತಿಯನ್ನು ಪ್ರೀತಿಸುತ್ತಿದ್ದು, ಆಕೆಯಿಂದ ದೂರ ಉಳಿಯುವಂತೆ ಯೋಗೇಶ್ ಗೆ ಎಚ್ಚರಿಕೆ ನೀಡಿದ್ದ. ಜುಲೈ 10 ರಂದು ಯೋಗೇಶ್ ಕಚೇರಿಗೆ ತೆರಳುತ್ತಿದ್ದ ವೇಳೆ ಆತನನ್ನು ಅಪಹರಿಸಿ ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Trump ಭಾಗಿಯಾಗಲಿರುವ ಗಾಜಾ ಶಾಂತಿ ಶೃಂಗಸಭೆಗೆ ಪ್ರಧಾನಿಗೆ ಈಜಿಪ್ಟ್‌ನ ಸಿಸಿ ಆಹ್ವಾನ: US ಅಧ್ಯಕ್ಷರೊಂದಿಗೆ ವೇದಿಕೆ ಹಂಚಿಕೊಳ್ತಾರಾ ಮೋದಿ?

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

Tomahawk Missiles: ಅಮೆರಿಕ ಉಕ್ರೇನ್ ಗೆ 'ಟೊಮಾಹಾಕ್ ಕ್ಷಿಪಣಿ' ನೀಡುವ ಸಾಧ್ಯತೆ, ರಷ್ಯಾದ ಬಿಗ್ ವಾರ್ನಿಂಗ್ ಏನು?

'ಕುವೆಂಪು ನಾಡಕವಿಯಲ್ಲ, ರಾಷ್ಟ್ರಕವಿ': ಬಿ.ವೈ. ವಿಜಯೇಂದ್ರಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು!

SCROLL FOR NEXT