ದಿವಂಗತ ದೇವರಾಜ್ ಅರಸ್ 
ರಾಜ್ಯ

ದೇವರಾಜು ಅರಸು ಜೀವನ ಚರಿತ್ರೆ ಆಧರಿಸಿ ಅದ್ದೂರಿ ಚಿತ್ರ ನಿರ್ಮಾಣ

ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜೀವನ ಚರಿತ್ರೆ ಆಧರಿಸಿ 3 ಕೋಟಿ ರೂ. ವೆಚ್ಚದಲ್ಲಿ ಅದ್ದೂರಿ ಕನ್ನಡ ಚಲನಚಿತ್ರ ನಿರ್ಮಿಸಲು ರಾಜ್ಯ ಸರ್ಕಾರ ...

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಜೀವನ ಚರಿತ್ರೆ ಆಧರಿಸಿ 3 ಕೋಟಿ ರೂ. ವೆಚ್ಚದಲ್ಲಿ ಅದ್ದೂರಿ ಕನ್ನಡ ಚಲನಚಿತ್ರ ನಿರ್ಮಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.ಡಿ. ದೇವರಾಜ ಅರಸು ಜನ್ಮಶತಮಾನೋತ್ಸವ ಸಮಿತಿ ಸಭೆ ನಂತರ ಸಮಾಜ ಕಲ್ಯಾಣ ಸಚಿವ ಆಂಜನೇಯ ಈ ವಿಷಯ ತಿಳಿಸಿದರು.

ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಮಹಾತ್ಮ ಗಾಂಧೀಜಿ ಜೀವನ ಚರಿತ್ರೆ ಆಧರಿಸಿ ಸಿನಿಮಾ ಮಾಡಲಾಗಿದೆ. ರಾಜ್ಯದಲ್ಲಿ ದೇವರಾಜ ಅರಸು ಅವರನ್ನು ಭೂಸುಧಾರಣೆ ಮತ್ತು ಹಿಂದುಳಿದ ವರ್ಗಗಳ ಹರಿಕಾರ ಎಂದು ಬಣ್ಣಿಸಲಾಗುತ್ತದೆ. ಈ ವರ್ಷ ಅವರ ಜನ್ಮಶತಮಾನೋತ್ಸವ ಆಚರಿಸಲಾಗುತ್ತಿದ್ದು, ಹಿಂದುಳಿದ ವರ್ಗಗಳ ಇಲಾಖೆಯಿಂದ ದೇವರಾಜ ಅರಸು ಅವರ ಸಂಪೂರ್ಣ ಜೀವನ ಚರಿತ್ರೆ ಒಳಗೊಂಡ ಚಲನಚಿತ್ರ ತಯಾರಿಸಲು ತೀರ್ಮಾನಿಸಲಾಗಿದೆ ಎಂದರು.

ವಿವಾದಕ್ಕೆ ಆಸ್ಪದ ನೀಡದ ರೀತಿ ಕಥೆ, ಚಿತ್ರಕಥೆ ಸಿದ್ಧಪಡಿಸುವ ಜವಾಬ್ದಾರಿಯನ್ನು ಹಿರಿಯ ನಿರ್ದೇಶಕ ಟಿ.ಎಸ್. ನಾಗಾಭರಣ ಅವರಿಗೆ ವಹಿಸಲಾಗಿದೆ. ಪಾತ್ರಧಾರಿಗಳನ್ನು ಅವರೇ ಆಯ್ಕೆ ಮಾಡಲಿದ್ದಾರೆ. ಅರಸು ಬಾಲ್ಯ, ಕೃಷಿಕನಾಗಿ, ಯುವ ನಾಯಕನಾಗಿ ಮತ್ತು ಮುಖ್ಯಮಂತ್ರಿಯಾಗಿ ಅವರು ಮಾಡಿರುವ ಸೇವೆ, ಜನಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ, ಅವರ ರಾಜಕೀಯ ಜೀವನವನ್ನು ಇಡಿಯಾಗಿ ಚಿತ್ರದಲ್ಲಿ ತೋರಿಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT